Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
"ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನನ್ನನ್ನು ಯಾರು ಹೆಚ್ಚು ನಿಂದಿಸುತ್ತಾರೋ, ಅಂತವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಸ್ಥಾನ ಸಿಗುತ್ತದೆ" ಎಂದು ಜೆಡಿಎಸ್ ಯುವ ಘಟಕದ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಗ್ದಾಳಿ ಮುಂದುವರಿದಿರುವ ಬೆನ್ನಲ್ಲೇ, ತಮ್ಮ ಹಾಗೂ ತಮ್ಮ ತಂದೆಯವರ ವಿರುದ್ಧ ಕಟು ಶಬ್ದಗಳನ್ನು ಬಳಸುತ್ತಿರುವ ಸಚಿವರು ಮತ್ತು ಆಡಳಿತ ಪಕ್ಷದ ನಾಯಕರ ವಿರುದ್ಧ ನಿಖಿಲ್ ಕಠಿಣ ಪದಗಳಲ್ಲಿ ತಿರುಗೇಟು ನೀಡಿದ್ದಾರೆ.

​‘ನಮ್ಮನ್ನು ಬೈಯಲು ಮುಖ್ಯಮಂತ್ರಿಗಳಿಂದ ಗುತ್ತಿಗೆ’:
​ಕಾಂಗ್ರೆಸ್ ನಾಯಕರ ಸರಣಿ ಟೀಕೆಗಳ ಕುರಿತು ವ್ಯಂಗ್ಯವಾಡಿರುವ ನಿಖಿಲ್ ಕುಮಾರಸ್ವಾಮಿ, "ಮುಖ್ಯಮಂತ್ರಿಗಳು ನಮ್ಮನ್ನು ಬೈಯಲೆಂದೇ ಕೆಲವರಿಗೆ ಗುತ್ತಿಗೆ ನೀಡಿದ್ದಾರೆ ಅನಿಸುತ್ತದೆ. ಯಾರು ಜೆಡಿಎಸ್ ಮತ್ತು ಕುಮಾರಸ್ವಾಮಿ ಅವರನ್ನು ಅತಿ ಹೆಚ್ಚು ನಿಂದಿಸುತ್ತಾರೋ, ಅಂತವರಿಗೆ ಮಂತ್ರಿಸ್ಥಾನ ನೀಡಲಾಗುತ್ತದೆ ಎಂದು ಆಡಳಿತ ಪಕ್ಷದಲ್ಲಿ ಆಂತರಿಕವಾಗಿ ಹೇಳಿರಬೇಕು. ಇದೇ ಕಾರಣಕ್ಕೆ ಕಾಂಗ್ರೆಸ್ ನಾಯಕರು ಪೈಪೋಟಿಗೆ ಬಿದ್ದಂತೆ ಮಾತನಾಡುತ್ತಿದ್ದಾರೆ" ಎಂದು ಲೇವಡಿ ಮಾಡಿದ್ದಾರೆ.

​‘ಪುಂಡಪೋಕರಿಗಳಿಗೆ ಉತ್ತರ ಕೊಡಲು ಬೇರೆಯವರಿದ್ದಾರೆ’:
​"ನಮ್ಮ ವಿರುದ್ಧ ಸಾರ್ವಜನಿಕವಾಗಿ ಹಗುರವಾಗಿ ಮಾತನಾಡುವ ಇಂತಹ ಪುಂಡಪೋಕರಿಗಳಿಗೆ ಅದೇ ಶೈಲಿಯಲ್ಲಿ ತಕ್ಕ ಉತ್ತರ ಕೊಡಲು ನಮ್ಮ ಪಕ್ಷದಲ್ಲಿ ಬೇರೆಯವರಿದ್ದಾರೆ. ಅದಕ್ಕೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ" ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

​‘ಸಂಪುಟ ಪುನರ್ ರಚನೆ ಬಳಿಕ ಅಸಲಿ ಚಿತ್ರಣ ತಿಳಿಯಲಿದೆ’:
​ರಾಜ್ಯ ಸರ್ಕಾರದಲ್ಲಿ ಸದ್ಯದಲ್ಲೇ ನಡೆಯಲಿದೆ ಎನ್ನಲಾದ ಸಚಿವ ಸಂಪುಟ ಪುನರ್ ರಚನೆ ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತು ಭವಿಷ್ಯ ನುಡಿದಿರುವ ಅವರು, "ಸಚಿವ ಸಂಪುಟ ಪುನರ್ ರಚನೆ ಮುಗಿದ ಮೇಲೆ ಸದ್ಯ ಅಬ್ಬರಿಸುತ್ತಿರುವವರಲ್ಲಿ ಯಾರು ಮಂತ್ರಿಗಳಾಗಿ ಉಳಿಯುತ್ತಾರೆ ಮತ್ತು ಯಾರು ಮನೆಗೆ ಹೋಗುತ್ತಾರೆ ಎಂಬುದು ಸಾರ್ವಜನಿಕ ವಲಯಕ್ಕೆ ತಾನಾಗಿಯೇ ತಿಳಿಯಲಿದೆ. ಅಲ್ಲಿಯವರೆಗೆ ಕಾಯಲಿ" ಎಂದು ಸವಾಲು ಹಾಕಿದ್ದಾರೆ.

​ರಾಜ್ಯ ಸರ್ಕಾರದ ಗ್ಯಾರಂಟಿ ಹಗರಣಗಳು ಮತ್ತು ಭೂಸ್ವಾಧೀನ ವಿವಾದಗಳ ನಡುವೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಈ ವೈಯಕ್ತಿಕ ಹಾಗೂ ರಾಜಕೀಯ ಕೆಸರೆರಚಾಟ ಈಗ ಮತ್ತೊಂದು ಹಂತಕ್ಕೆ ತಲುಪಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ತಾ ಇಲಾಖೆಯ ನೂತನ ಆಯುಕ್ತ ಎಂ.ಎನ್. ಅನುಚೇತ್ ಅವರಿಗೆ ಕೆಯುಡಬ್ಲ್ಯೂಜೆ ಶುಭ ಹಾರೈಕೆಶಿಕ್ಷಣ ಹೆಚ್ಚಿದರೂ ಸಂಸ್ಕಾರ ಕಡಿಮೆಯಾದರೆ ಜ್ಞಾನ ನಿಷ್ಫಲ:ಜ್ಞಾನದ ಅರಿವು ಇಂದಿನ ಸಮಾಜಕ್ಕೆ ಅನಿವಾರ್ಯ: ಸಾಹಿತಿ ಮಣ್ಣೆ ಮೋಹನ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸ್ನಾತಕ ಸಾರ್ಥಕತೆ ಸಮಾರಂಭಟ್ವಿಟರ್‌ನಲ್ಲಿ ಉಪದೇಶ ನಿಲ್ಲಿಸಿ ಸರ್ಕಾರದ ‘ರಿಯಾಲಿಟಿ ಚೆಕ್’ ಮಾಡಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಕಿಡಿಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ ಪಿ.ಜಿ.ಆರ್. ಸಿಂಧ್ಯಾರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ಕರ್ನಾಟಕದ ಹೆಗಲಿಗೆ ದೇಶದ ನೀತಿ-ನಿರೂಪಣೆಯ ಜವಾಬ್ದಾರಿ;ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಶಿವಕುಮಾರ್ ಮಹತ್ವದ ಸಭೆ