i
ಬೆಂಗಳೂರು
ಬೈಕ್ ವ್ಹೀಲಿಂಗ್ ಮಾಡಲು ಹೋದ ಯುವಕರು, ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಯಲಹಂಕದ ಜಿಕೆವಿಕೆ ಬಳಿ ನಡೆದಿದೆ. ನಾಗವಾರ ಗೋವಿಂದಪುರದ ಮಹ್ಮದ್ ಹದಿ, ಅಹಮದ್ ಖಾನ್ ಮತ್ತು ಸೈಯದ್ ರಿಯಾಜ್ ಮೃತರು.
ಇಂದು ಬೆಳಗ್ಗೆ 6.30ರ ಸುಮಾರಿಗೆ ಯುವಕರು ಬೈಕ್ ವ್ಹೀಲಿಂಗ್ ಮಾಡುವಾಗ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.