i
ಚಿತ್ರದುರ್ಗ:
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಪಶುಪಾಲನೆ ಪಶುವೈದ್ಯಕೀಯ ಇಲಾಖೆ ಚಿತ್ರದುರ್ಗ ಇದರ ಸಂಯುಕ್ತ ಆಶ್ರಯದಲ್ಲಿ ” ರಾಷ್ಟ್ರೀಯ ಗೋಕುಲ್ ಮಿಷನ್ “ಯೋಜನೆಯಡಿ ರಾಷ್ಟ್ರೀಯ ಕೃತಕ ಗರ್ಭಧಾರಣಾ ಯೋಜನೆ ಕಾರ್ಯಕ್ರಮವನ್ನು ಚಿತ್ರದುರ್ಗ ತಾಲ್ಲೂಕು ಗೊಡಬನಾಳ್ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಉದ್ಘಾಟಿಸಿ ಮಾತನಾಡಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದ್ದು ನಮ್ಮ ಜಿಲ್ಲೆಯಲ್ಲಿ ಐದು ನೂರು ಗ್ರಾಮಗಳು ಆಯ್ಕೆ ಮಾಡಿಕೊಳ್ಳಲಾಗಿದ್ದು ಸುಮಾರು ಐವತ್ತು ಸಾವಿರ ರಾಸುಗಳಿಗೆ ಕೃತಕ ಗರ್ಭಧಾರಣೆ ಯೋಜನೆಯನ್ನು ಹಮ್ಮಿ ಕೊಂಡಿದ್ದು ರೈತರು ಈ ಯೋಜನೆಯ ಉಪಯೋಗ ಪಡೆದುಕೊಂಡ ಕೃಷಿ ಜತೆಗೆ ಹಸು ಸಾಕಣೆಕೆ ಮೂಲಕ ಉಪಕಸುಬಾಗಿ ಮಾಡಿಕೊಳ್ಳಬೇಕು ಆಗ ರೈತರು ಆರ್ಥಿಕವಾಗಿ ಸಬಲರಾಗತಿರಾ ಎಂದು ತಿಳಿಸಿದರು.
ರೈತರು ಪಶುಗಳನ್ನು ಸಾಕುವುದರ ಮೂಲಕ ತಾವು ಬೆಳೆಯುವ ಬೆಳೆಯಲ್ಲಿ ರಾಸಾಯನಿಕ ಗೊಬ್ಬರವನ್ನು ಬಳಸುವುದನ್ನು ನಿಲ್ಲಿಸಿ ಸಾವಯವ ಗೊಬ್ಬರಕ್ಕೆ ಹೆಚ್ಚು ಒತ್ತು ನೀಡಿದರೆ ಫಲವತ್ತಾದ ಬೆಳೆಯನ್ನು ಬೆಳೆಯಬಹುದು ಆಗ ಮನುಷ್ಯನ ಆರೋಗ್ಯವೂ ಸಹ ವೃದ್ಧಿಯಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಮಾತನಾಡಿ ರೈತರು ಸಾವಯವ ಕೃಷಿಗೆ ಹೆಚ್ಚು ಒತ್ತು ಕೊಡಬೇಕು. ನಾನು ಮಂಡ್ಯದಲ್ಲಿ ಕಾರ್ಯನಿರ್ವಹಿಸುವಾಗ ಅಲ್ಲಿನ ರೈತರು ಅತಿ ಹೆಚ್ಚು ಸಮಯ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದುರು. ಜೊತೆಗೆ ಹಸುಗಳನ್ನು ಸಾಕುವುದರ ಮೂಲಕ ಹಾಲಿನ ಡೈರಿಗೆ ಹಾಲು ಹಾಕಿ ತಮ್ಮ ಉಪ ಕಸುಬನ್ನಾಗಿಸಿಕೊಂಡು ಆರ್ಥಿಕವಾಗಿ ಸಬಲರಾಗಿದ್ದುರು. ನಮ್ಮ ಜಿಲ್ಲೆಯಲ್ಲೂ ಸಹ ರೈತರು ಕೃಷಿಯ ಜತೆಗೆ ಉಪಕಸುಬನ್ನು ಮಾಡುವುದರ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಯೋಜನೆಗಳಿದ್ದು ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಭೆಯ ಅಧ್ಯಕ್ಷತೆಯನ್ನು ಹಾಲು ಒಕ್ಕೂಟದ ಅಧ್ಯಕ್ಷ ಕಿರಣ್ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಉಪ ನಿರ್ದೇಶಕ ಕೃಷ್ಣಪ್ಪ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಮಲ್ಲೇಶಪ್ಪ ಹಾಗೂ ಪಶು ವೈದ್ಯಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.