i
ಚಿತ್ರದುರ್ಗ:
ಕೊರೋನಾ ಸೋಂಕಿಗೆ ತುತ್ತಾಗಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶೀಘ್ರವೇ ಗುಣಮುಖರಾಗಲೆಂದು ನಗರ ಬಿಜೆಪಿ ಘಟಕದಿಂದ ಸೋಮವಾರ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಪೂಜೆಯಲ್ಲಿ ಭಾಗವಹಿಸಿ ನಂತರ ಮಾತನಾಡಿ ಅಭಿವೃದ್ಧಿಯ ಹರಿಕಾರ , ಸುವರ್ಣ ಕರ್ನಾಟಕದ ರುವಾರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೋನಾ ನಿರ್ಮೂಲನೆಗಾಗಿ ಹಗಲಿರುಳು ಯುದ್ಧೋಪಾದಿಯಲ್ಲಿ ಶ್ರಮಿಸಿ ಈಗ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಗವಂತನ ಕೃಪೆಯಿಂದ ಗುಣಮುಖರಾಗಿ ಬಂದು ಮತ್ತೆ ರಾಜ್ಯದ ಜನರ ಸೇವೆ ಸಲ್ಲಿಸುವ ಶಕ್ತಿ ನೀಡಲಿ ಎಂದು ನೀಲಕಂಠೇಶ್ವರಸ್ವಾಮಿಯಲ್ಲಿ ಪ್ರಾರ್ಥಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಜೆ.ಶಶಿಧರ್ ಮಾತನಾಡಿ ಸಮಸ್ಯೆಗಳನ್ನೇ ಸವಾಲುಗಳನ್ನಾಗಿ ಸ್ವೀಕರಿಸಿ ಒಂದು ವರ್ಷದ ಅಧಿಕಾರವಧಿ ಪೂರೈಸಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೋನಾ ಸೋಂಕು ತಗುಲಿರುವುದು ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಗುಣಮುಖರಾಗಿ ಮತ್ತೆ ಕೊರೋನಾ ವಿರುದ್ಧ ಹೋರಾಡುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.
ಹಿರಿಯರಾದ ತಿಪ್ಪೇಸ್ವಾಮಿ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಭಾನುಮೂರ್ತಿ, ಯಶವಂತ್, ಶಿವಕುಮಾರ್, ಶ್ರೀರಾಮ್, ನಾಗರಾಜ್, ಎನ್.ಕೃಷ್ಣ ,ರಾಜು, ವರುಣ್, ರಾಕೇಶ್, ಪ್ರಸನ್ನ, ಮಾಧ್ಯಮ ವಿಭಾಗದ ಧನಂಜಯ್, ಚಂದನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.