i
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಒಕ್ಕಲಿಗ ಸಮಾಜದ ಪ್ರಭಾವಿ ಮುಖಂಡ ಸಾಲಿ ಗ್ರಾಮದ ಬಾಬು ಹನುಮಾನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದು ಕ್ಷೇತ್ರದಲ್ಲಿ ಚಂಲನ ಮೂಡಿಸಿದೆಯಲ್ಲತೆ ಮತದಾರಲ್ಲಿ ಮತ್ತಷ್ಟು ರಾಜಕೀಯ ಆಸಕ್ತಿ ಇಮ್ಮಡಿಗೊಳಿಸಿದೆ.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳ ಹಿಂದೆ ಬಿಜೆಪಿಯಿಂದ ಸ್ಪರ್ಧೆ ಮಾಡಿ ದಾಖಲೆಯ 26 ಸಾವಿರ ಮತಗಳನ್ನು ಪಡೆದಿದ್ದ ದಿವಂಗತ ಎಸ್.ಎ. ಗೋವಿಂದರಾಜು ಅವರ ಪುತ್ರ ಬಾಬು ಹನುಮಾನ್ ಅವರು ಬಿಜೆಪಿ ಸೇರ್ಪಡೆಯಾಗಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಬಾಬು ಹನುಮಾನ್ ಅವರ ತಾಯಿ ಸುಮಿತ್ರಮ್ಮ ಗೋವಿಂದರಾಜು ಅವರು ಸಾಲಿಗ್ರಾಮ ಕ್ಷೇತ್ರದಿಂದ ಕಳೆದ 10 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದ ಚಿಹ್ನೆ ಅಡಿ ಜಿಪಂಗೆ ಆಯ್ಕೆಯಾಗಿದ್ದರು. ಅಲ್ಲದೆ ಕಳೆದ ಜಿಪಂ ಚುನಾವಣೆ ಸಂದರ್ಭದಲ್ಲಿ ಮಿರ್ಲೆ ಜಿಪಂ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದ ಬಾಬು ಹನುಮಾನ್ ಶಾಸಕ ಸಾ.ರಾ. ಮಹೇಶ್ ಅವರ ಸಹೋದರ ಸಾ.ರಾ. ನಂದೀಶ್ ಅವರಿಗೆ ಪ್ರಬಲ ಸ್ಪರ್ಧೆ ನೀಡಿ 9 ಸಾವಿರಕ್ಕೂ ಅಧಿಕ ಮತ ಗಳಿಸಿದ್ದನ್ನು ಸ್ಮರಿಸಬಹುದಾಗಿದೆ.
ಬಾಬು ಹನುಮಾನ್ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವುದರಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸವಾಲು ಒಡ್ಡಲಿದ್ದು, ಇದು ಬಾರಿ ಕುತೂಹಲಕ್ಕೆ ಕಾರಣವಾಗಿದೆ ಎನ್ನಲಾಗಿದೆ.