i
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್ ಟಿ ಸಮುದಾಯಕ್ಕೆ ಮೀಸಲು ಹೆಚ್ಚಿಸಲು ಕೈಗೊಳ್ಳಲಾದ ನಿರ್ಣಯದ ಹಿನ್ನೆಲೆಯಲ್ಲಿ ವಾಲ್ಮೀಕಿ ಗುರುಪೀಠದ ಪೂಜ್ಯ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರುಗಳ ಸಾನ್ನಿಧ್ಯದಲ್ಲಿ ರಾಜ್ಯ ಸ್ವಾಭಿಮಾನಿ ಎಸ್ ಸಿ, ಎಸ್ ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ಸದಸ್ಯರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು.
ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿಗೇ ಆಗಮಿಸಿದ ವಾಲ್ಮೀಕಿ ಸಮಾಜದ ಶ್ರೀಗಳು, ಸಮುದಾಯದ ಮೀಸಲಾತಿ ಹೆಚ್ಚಿಸಲು ತಾವುಗಳು ನಡೆಸಿದ ಹೋರಾಟಕ್ಕೆ ಬೆಂಬಲ ನೀಡಿದ ನನ್ನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಆಶೀರ್ವದಿಸಿದರು. ನಾನು ಮುಖ್ಯಮಂತ್ರಿ ಆಗಿದ್ದಾಗ ನ್ಯಾ.ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಮಾಡಿದ್ದನ್ನು ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು.
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಜೆಡಿಎಸ್ ಪಕ್ಷದ ಕಚೇರಿಗೆ ಆಗಮಿಸಿ ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಮಾಡಿ ಮೀಸಲು ಹೆಚ್ಚಳಕ್ಕೆ ಕುಮಾರಸ್ವಾಮಿ ಅವರು ಮೂಲ ಕಾರಣರಾಗಿದ್ದಾರೆ ಎಂದು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ಅಭಿನಂದನಾ ಪತ್ರವನ್ನು ಓದಿ ಗೌರವಿಸಲಾಯಿತು.