i
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾಜಿ ಸಚಿವ ಟಿ.ಬಿ.ಜಯಚಂದ್ರರವರು ನವದೆಹಲಿಯಲ್ಲಿ ಕೇಂದ್ರ ಹಿಂದುಳಿದ ವರ್ಗಗಳ ಉಪ ಪಂಗಡಗಳ “ರೋಹಿಣಿ” ನಿಯೋಗದ ಅಧ್ಯಕ್ಷರು ಹಾಗೂ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಿ.ರೋಹಿಣಿ ಯವರನ್ನು ಭೇಟಿ ಮಾಡಿ ಕರ್ನಾಟಕದ ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಮನವಿ ಸಲ್ಲಿಸಿ ಇದಕ್ಕೆ ಪೂರಕವಾದ ದಾಖಲಾತಿಗಳನ್ನು ಸಲ್ಲಿಸಿ ಒತ್ತಾಯಿಸಿದರು. ಮಾಜಿ ಸಚಿವ ಟಿ.ಬಿ.ಜಯಚಂದ್ರರವರು ಮನವಿ ಸಲ್ಲಿಸಿ ಮಾತನಾಡಿ ಸುಮಾರು 2ದಶಕಗಳ ಕಾಲ ಸಮುದಾಯಕ್ಕೆ ಓಬಿಸಿ ಮೀಸಲಾತಿ ಕಲ್ಪಿಸಲು ಹೋರಾಟ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಇದ್ದಂತಹ ಅನೇಕ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿ, ತಾವು ಕಾನೂನು ಸಚಿವರಾಗಿದ್ದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದ ಮೂಲಕ ಸಮುದಾಯದ ಕುಲಶಾಸ್ತ್ರ ಅಧ್ಯಯನ ಮಾಡಿಸಿದ್ದು ಈಗಾಗಲೇ 2019ರಲ್ಲಿ ಈ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಗಳು ಕುಲಶಾಸ್ತ್ರೀಯ ಅಧ್ಯಯನ ವರದಿಯೊಂದಿಗೆ ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಪತ್ರ ಬರೆದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಅಂಗಳದಲ್ಲಿ ಕುಲಶಾಸ್ತ್ರೀಯ ಅಧ್ಯಯನ ವರದಿ ಮತ್ತು ಒಬಿಸಿ ನೀಡಿಕೆಯ ಪ್ರಸ್ತಾವನೆ ಬಂದು ನಿಂತಿದ್ದು ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಓಬಿಸಿ ಮೀಸಲಾತಿ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದ್ದು ತೀರ್ಮಾನ ಮಾಡಬೇಕೆಂದು ನ್ಯಾಯಮೂರ್ತಿಗಳಲ್ಲಿ ಟಿ ಬಿ ಜಯಚಂದ್ರ ಮನವಿ ಮಾಡಿದ್ದಾರೆ.