i
ಚಂದ್ರವಳ್ಳಿ ನ್ಯೂಸ್, ಮೈಸೂರು:
ಭವಿಷ್ಯದ ಅಥವಾ 2023ರ ವಿಧಾನಸಭಾ ಚುನಾವಣೆ ನಂತರ ಶಾಸಕರು ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಿದ್ದಾರೆ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಇವರೇ ಎಂದು ಯಾರೂ ಹೇಳಿ ಗೊಂದಲ ಸೃಷ್ಠಿಸಬಾರದು ಎಂದು ಕಾಂಗ್ರೆಸ್ ಹೈ ಕಮಾಂಡ್ ಎಚ್ಚರಿಕೆ ನೀಡಿದ್ದರೂ ಇದನ್ನ ಲೆಕ್ಕಿಸದ ಮತ್ತೆ ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಕೂಗು ಪ್ರತಿಧ್ವನಿಸುತ್ತಿರುತ್ತದೆ.
ಇತ್ತೀಚೆಗೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ನಡೆದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಲಿದ್ದಾರೆಂದು ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಮಾತನಾಡಿ, ನಾನು ಮತ್ತು ಕೆ.ಪಿ. ನಂಜುಂಡಿ ಅವರು ವಿಧಾನಸೌಧಕ್ಕೆ ಹೋಗುವುದು ಮುಖ್ಯವಲ್ಲ, ಸಿದ್ದರಾಮಯ್ಯ ಅವರಂತಹ ನಾಯಕರು ವಿಧಾನಸಭೆಗೆ ಹೋಗಬೇಕು. ಡಿ. ದೇವರಾಜ ಅರಸು ನಂತರ ಸಣ್ಣಪುಟ್ಟ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿದವರು ಸಿದ್ದರಾಮಯ್ಯ ಮಾತ್ರ ಎಂದು ತಿಳಿಸಿದರು. ಮುಂದುವರೆದು ಮಾತನಾಡಿದ ರಘು ಆಚಾರ್, ನಾನು ಮನಸಾರೆ ಮಾತನಾಡುತ್ತಿದ್ದೇನೆ, ಫ್ಯೂಚರ್ ಮುಖ್ಯಮಂತ್ರಿಗಳು ಸಿದ್ದರಾಮಯ್ಯ. ಮುಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ. ನಾನು ವಿಧಾನಸಭೆಗೆ ಹೋಗಬೇಕು ಅನ್ನೋದು ನನಗೆ ಮುಖ್ಯವಲ್ಲ. ಸಣ್ಣಪುಟ್ಟ ಸಮುದಾಯಗಳಿಗೆ ಪ್ರಾತಿನಿಧ್ಯ ಕೊಡಿ ಎಂದು ರಘು ಆಚಾರ್ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.