i
ಇಂಜಿನಿಯರಿಂಗ್ ವಿದ್ಯಾರ್ಥಿನಿ ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿ…!?
ಚಂದ್ರವಳ್ಳಿ ನ್ಯೂಸ್, ರಾಮನಗರ:
ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಸೇರಿದಂತೆ ಮೂರು ಮಂದಿ ಭಾಗಿಯಾಗಿರುವ ಶಂಕೆ ಮೇಲೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಅಕ್ಟೋಬರ್ 24 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದರು. ಇದೀಗ ಸ್ವಾಮೀಜಿಗೆ ಹನಿಟ್ರ್ಯಾಪ್ ಮಾಡಿದ ಆರೋಪ ಪ್ರಕರಣದಲ್ಲಿ ಮೂವರನ್ನ ಬಂಧಿಸಲಾಗಿದೆ.
ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಣನೂರು ಮಠದ ಮೃತ್ಯುಂಜಯಶ್ರೀ, ದೊಡ್ಡಬಳ್ಳಾಪುರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಹಾಗೂ ಕಣನೂರು ಮಠದ ವಕೀಲ ಮಹದೇವಯ್ಯ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ನೀಲಾಂಬಿಕೆ ಮೂಲ ಹೆಸರು ಚಂದು ಅಂತ ಹೇಳಲಾಗುತ್ತಿದೆ. ಅದೇ ರೀತಿ ಬಂಧಿತ ಆರೋಪಿ ವಕೀಲ ಮಹದೇವಯ್ಯ, ತುಮಕೂರು ಮೂಲದವರೆನ್ನಲಾಗಿದೆ. ಕಣ್ಣೂರು ಸ್ವಾಮೀಜಿಗೆ ಸಾಥ್ ನೀಡಿದ್ದು ನೀಲಾಂಬಿಕೆ, ನೀಲಾಂಬಿಕೆ ಅಲಿಯಾಸ್ ಚಂದು ಎಂಬುವಳಿಂದ ಸಾಥ್ ನೀಡಲಾಗಿದ್ದು, ದೊಡ್ಡಬಳ್ಳಾಪುರ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿ, ಬೆಂಗಳೂರಿನಲ್ಲಿ ವಾಸವಿದ್ದ ಮಾಹಿತಿ ಇದೆ. ಫೆಬ್ರವರಿಯಲ್ಲಿ ವಿಡಿಯೋ ಮಾಡಲು ಪ್ಲ್ಯಾನ್ ಮಾಡಿದ್ದರು, ಏಪ್ರಿಲ್ನಲ್ಲಿ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದರು, ನಿವೃತ್ತ ಶಿಕ್ಷಕನೂ ಆಗಿರುವ ಮಹದೇವಯ್ಯ, ನೀಲಾಂಬಿಕೆ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಗೂ ಮಹದೇವಯ್ಯ ಸ್ವಾಮೀಜಿಗೆ ಬೆದರಿಕೆ ಹಾಕಿದ್ದರು. ಕಣ್ಣೂರು ಸ್ವಾಮೀಜಿಯ ಶಿಷ್ಯೆಯಾಗಿದ್ದ ನೀಲಾಂಬಿಕೆ, ಕಣನೂರು ಮೃತ್ಯುಂಜಯ ಶ್ರೀ ಇಬ್ಬರು ರಕ್ತ ಸಬಂಧಿಗಳಾಗಿದ್ದು, ಇಬ್ಬರೂ ದೊಡ್ಡಪ್ಪ ಚಿಕ್ಕಪ್ಪನ ಮಕ್ಕಳು ಎಂಬ ಮಾಹಿತಿ ಲಭ್ಯವಾಗಿದೆ. ಬಂಡೆಮಠದ ಸ್ವಾಮೀಜಿಯ ಪೀಠದ ಮೇಲೆ ಮೃತ್ಯುಂಜಯ ಶ್ರೀ ಕಣ್ಣಿಟ್ಟಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಬೆಂಗಳೂರು ಮೂಲದ ಯುವತಿಯನ್ನ ಮುಂದಿಟ್ಟುಕೊಂಡು ಶ್ರೀಗಳ ವಿರುದ್ಧ ಸಂಚು ರೂಪಿಸಿದ್ದರು ಎಂಬ ಆರೋಪ ಇದೆ. ಬಂಧಿತ ಯುವತಿ ಕೂಡ ಮೃತ್ಯುಂಜಯ ಶ್ರೀಯ ಹಳೆಯ ಶಿಷ್ಯೆ ಕೂಡ ಹೌದು ಎಂದು ತಿಳಿದು ಬಂದಿದೆ.