i
ಗ್ರಾಪಂ ಪಿಡಿಒಗಳಿಂದ ನ.2ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ…
ಚಂದ್ರವಳ್ಳಿ ನ್ಯೂಸ್, ಮೈಸೂರು/ಗುಂಡ್ಲುಪೇಟೆ:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 2 ರಿಂದ ಹೋರಾಟ ಮಾಡಲು ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳು ನಿರ್ಧರಿಸಿದ್ದಾರೆ.
ನ.2ರಂದು ಬೆಂಗಳೂರಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿವಿಧ 11 ಬೇಡಿಕೆ ಈಡೇರಿಸಬೇಕೆಂಬುದು ನಮ್ಮಗಳ ನ್ಯಾಯಯುತ ಬೇಡಿಕೆಗಳಾಗಿವೆ. ಫ್ರೀಡಂ ಪಾರ್ಕ್ ಬೆಂಗಳೂರು ಚಲೋ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಜಿಲ್ಲೆಯ ಪಿಡಿಒಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸುತ್ತಿದ್ದು ಹೋರಾಟ ನಿಲ್ಲುವ ತನಕ ಕುಡಿವ ನೀರು ಮತ್ತು ಬೀದಿ ದೀಪ ಸೇವೆಗಳು ಮಾತ್ರ ಸಿಗಲಿವೆ. ಇನ್ನೂಳಿದ ಎಲ್ಲಾ ಸೇವೆ ಸ್ಥಗಿತಗೊಳ್ಳಲಿರುವ ಕಾರಣ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.