i
ಹಿಂದುಳಿದ ವರ್ಗದವರಿಗೆ ಅತಿ ಹೆಚ್ಚು ದ್ರೋಹ ಮಾಡಿದ್ದು ಸಿದ್ದರಾಮಯ್ಯ-ಈಶ್ವರಪ್ಪ ವಾಗ್ದಾಳಿ…
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಸಿದ್ದರಾಮಯ್ಯ ಹಿಂದುಳಿದ ವರ್ಗದವರ ಹೆಸರಲ್ಲಿ ಮತ ಪಡೆದ ಸಿಎಂ ಆದ ಮೇಲೆ ಹಿಂದುಳಿದ ವರ್ಗದವರಿಗೆ ಅತಿ ಹೆಚ್ಚು ದ್ರೋಹ ಮಾಡಿರುವುದರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ಉದ್ದೇಶಿಸಿ ಹಿಂದುಳಿದ ವರ್ಗದ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡಿದರು. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯನವರ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಮೋದಿ ಅವರನ್ನು ಬೈಯುತ್ತಾರೆ. ಆದರೆ, ಇವರನ್ನು ಗುಂಡಿಯಲ್ಲಿ ಮಣ್ಣು ಹಾಕಿ ಮುಚ್ಚೋದಕ್ಕೆ ಜನ ಕಾಯ್ತಾ ಇದ್ದಾರೆ. 70 ವರ್ಷ ಆಡಳಿತ ಮಾಡಿರುವ ಕಾಂಗ್ರೆಸ್ ಈವರೆಗೂ ಯಾವುದೇ ಮೀಸಲಾತಿ ಹೆಚ್ಚಳ ಮಾಡಿಲ್ಲ. ಸತ್ತು ಹೋದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಖರ್ಗೆಯವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆಂದು ವಾಗ್ದಾಳಿ ಮಾಡಿದರು.
ದೇಶದಲ್ಲಿ ಶೇ. 62 ರಷ್ಟು ಹಿಂದುಳಿದ ವರ್ಗಗಳ ಜನ ಇದ್ದಾರೆ. ಹಿಂದುಳಿದ ವರ್ಗದವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಂದೊಂದು ಟಿಕೆಟ್ ಕೊಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.
ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ 27 ಜನ ಹಿಂದುಳಿದ ವರ್ಗದರಿಗೆ ಮೋದಿ ಅವರು ಸ್ಥಾನ ಕೊಟ್ಟಿದ್ದಾರೆ. ಕಾಂಗ್ರೆಸ್ನ ಸಿದ್ದರಾಮಯ್ಯ, ಡಿಕೆಶಿ ಅವರು ಎಷ್ಟು ಜನರಿಗೆ ಕೊಟ್ಟಿದ್ದಾರೆ ಹೇಳಲಿ, ಆರ್ಎಸ್ಎಸ್ ಮುಗಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಆರ್ಎಸ್ಎಸ್ ಅನ್ನೋ ಮೂರು ಪದದ ಸಹವಾಸಕ್ಕೆ ಬಂದ್ರೆ ಮುಂದಿನ ಚುನಾವಣೆಯಲ್ಲಿ ಹೇಳ ಹೆಸರಿಲ್ಲದ ಹಾಗೆ ಹೋಗ್ತಾರೆ. ಆರ್ಎಸ್ಎಸ್ ಸಂಘಟನೆ ಭಯತ್ಪಾದಕರಿಗೆ ಸಿಂಹ ಸ್ವಪ್ನವಾಗಿದೆ ಎಂದು ಹೇಳಿದರು.