i
ಜೆಡಿಎಸ್ ಪಂಚರತ್ನ ಯಾತ್ರೆಗೆ ಮಳೆ ಅಡ್ಡಿ, ವಾರಕಾಲ ಮುಂದೂಡಿಕೆ-ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಕೋಲಾರ/ಮುಳಬಾಗಿಲು;
2023ರಕ್ಕೆ ಜೆಡಿಎಸ್ ಅಧಿಕಾರಕ್ಕೆ ತರಲೇಬೇಕೆನ್ನುವ ಉತ್ಸಾಹದಲ್ಲಿರುವ ಜೆಡಿಎಸ್ ನಾಯಕರಿಗೆ, ಮುಖಂಡರಿಗೆ ಸತತ ಮಳೆಯಿಂದಾಗಿ ಹಿನ್ನಡೆಯಾಗಿದೆ. ನಿರಂತರವಾಗಿ ಮಳೆಸುರಿಯುತ್ತಿರುವುದರಿಂದ ಒಂದು ವಾರಕಾಲ ಪಂಚರತ್ನ ರಥಯಾತ್ರೆಯನ್ನು ಮುಂದೂಡುತ್ತಿರುವುದಾಗಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ಕೈಗೊಂಡಿದ್ದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ವಿಶೇಷ ಪೂಜೆ ನಡೆಸಿದರು.
ದೇವರ ಪ್ರಸಾದ ಹಾಗೂ ಚೆನ್ನಾಗಿ ಪೂಜೆಯೂ ನಡೆಯಿತು. ಆದರೆ, ಮಳೆ ಹೆಚ್ಚಾಗಿ ಬರುತ್ತಿರುವುದರಿಂದ ಸಮಾವೇಶ ನಡೆಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಪಂಚರತ್ನ ರಥಯಾತ್ರೆ ಒಂದು ವಾರಕಾಲ ಮುಂದೂಡಲಾಗಿದೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.
ಪಂಚರತ್ನ ರಥಯಾತ್ರೆ ಆರಂಭದ ದಿನವೇ ಮಳೆ ಬಂದಿರುವುದು ಶುಭ ಸೂಚನೆ. ಯಾತ್ರೆಯ ಮುಂದಿನ ದಿನಾಂಕವನ್ನು ಮೂರು ದಿನಗಳೊಳಗೆ ಚರ್ಚೆ ಮಾಡಿ ನಿಗದಿ ಮಾಡಲಾಗವುದು ಎಂದು ಹೇಳಿದ್ದಾರೆ.