i
ಲೋಕಾಯುಕ್ತ ದಾಳಿ ಇ-ಸ್ವತ್ತು ಮಾಡಲು ಲಂಚ ಸ್ಪೀಕರಿಸುವ ವೇಳೆ ಗ್ರಾಪಂ ಪಿಡಿಒ, ಎಸ್ ಡಿಎ ಬಂಧನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ;
ಮನೆ ಆಸ್ತಿಯ ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಮತ್ತು ಎಸ್.ಡಿ.ಎ. ಇಬ್ಬರು ಸಿಬ್ಬಂದಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಜರುಗಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಹಾಗೂ ದ್ವಿತೀಯ ದರ್ಜೆಯ ಸಹಾಯಕಿ ಸೋನು ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿತ ಪಿಡಿಒ ಶಿವಕುಮಾರ್ 8 ಸಾವಿರ ರೂ.ಗಳ ಲಂಚದ ಹಣ ಸ್ಪೀಕರಿಸುವಾಗ ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ವಿವರಃ
ಹೊಳಲ್ಕೆರೆ ತಾಲೂಕಿನ ಗಂಜಿಗಟ್ಟೆ ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಮನೆಯ ಇ-ಸ್ವತ್ತು ಮಾಡಿಕೊಡಲು ಪಿಡಿಒ ಮತ್ತು ಎಸ್ ಡಿಎ ಇಬ್ಬರು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ತಿಪ್ಪೇಸ್ವಾಮಿ ಎನ್ನುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ, ಡಿವೈಎಸ್ಪಿ ಜಿ. ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ವೃತ್ತ ನಿರೀಕ್ಷಕಿ ವೈ.ಎಸ್.ಶಿಲ್ಪಾ ಮತ್ತಿತರರು ಲಂಚದ ಹಣ ಸಮೇತ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.