i
ದೇವರಕೊಟ್ಟ ಚೆಕ್ ಡ್ಯಾಂನಲ್ಲಿ ಈಜಾಡಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ದೇವರಕೊಟ್ಟ ಚೆಕ್ ಡ್ಯಾಂ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಈಜಾಡಲು ಹೋಗಿದ್ದು ಶವವಾಗಿ ಶನಿವಾರ ಪತ್ತೆಯಾಗಿದ್ದಾನೆ.
ಶುಕ್ರವಾರ ಅಪರಿಚಿತ ವ್ಯಕ್ತಿಯೊಬ್ಬ ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದು ಈಜು ತಜ್ಞರ ಸಹಾಯದಿಂದ ಶವ ಪತ್ತೆಯಾಗಿದೆ.
ಅಪರಿಚಿತ ವ್ಯಕ್ತಿಯ ಚೆಕ್ ಡ್ಯಾಂ ದಡದಲ್ಲಿ ಬಟ್ಟೆ ಹಾಗೂ ಚಪ್ಪಲಿ ಇದ್ದವು. ಪಿಎಸ್ಐ ಪರಶುರಾಮ್, ಅಗ್ನಿ ಶಾಮಕದಳದ ಸುಭಾನ್ ಸಾಬ್, ಗ್ರಾಮ ಪಂಚಾಯಿತಿ ಸದಸ್ಯರಾದ ರಂಗಸ್ವಾಮಿ, ಅನಿಲ್ ಮತ್ತಿತರರು ಪತ್ತೆ ಕಾರ್ಯದಲ್ಲಿ ತೊಡಗಿದ್ದರು. ಮೃತ ಅಪರಿಚಿತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.