![](https://www.chandravallinews.com/wp-content/uploads/2022/11/CEO-3-1024x1155.jpeg)
i
ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗಾಗಿ ಪವಿತ್ರ ಮೃತ್ತಿಗೆ ಸಂಗ್ರಹ ಅಭಿಯಾನ ರಥ ನ. 06 ರಂದು ಹಿರಿಯೂರಿಗೆ ಆಗಮನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಗೆ (ಮಣ್ಣು) ಸಂಗ್ರಹ ಅಭಿಯಾನಕ್ಕಾಗಿ ರಥವು ನ. 06 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮಕ್ಕೆ ಆಗಮಿಸಲಿದೆ.
ಜಿಲ್ಲೆಯಲ್ಲಿ ರಥ ಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಥಕ್ಕೆ ಸ್ವಾಗತ ಕೋರಲು ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಅಂದು ಬೆಳಿಗ್ಗೆ 09 ಗಂಟೆಗೆ ಜವಗೊಂಡನಹಳ್ಳಿ ಗ್ರಾಮದಲ್ಲಿ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಅವರು ತಿಳಿಸಿದ್ದಾರೆ.