i
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ, ಪೊಲೀಸರ ಮೌನ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸರಗಳ್ಳತನ ಹೆಚ್ಚುತ್ತಿದ್ದು ಪೊಲೀಸರು ದಿವ್ಯ ಮೌನಕ್ಕೆ ಶರಣಾಗಿದ್ದಾರೆ ಎನ್ನುವ ಅನುಮಾನ ಮೂಡತೊಡಗಿದೆ. ಪ್ರತಿ ನಿತ್ಯ ಒಂದಲ್ಲೊಂದು ಸರಗಳ್ಳತನಗಳು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ. ಆದರೂ ಪೊಲೀಸರು ಎಚ್ಚೆತ್ತುಕೊಂಡಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದೆ.
ಭಾನುವಾರ ಬೆಳಿಗ್ಗೆ ವಾಕ್ ಮಾಡುವ ವೇಳೆ ವೃದ್ದೆಯ ಕೊರಳಲಿದ್ದ ಬಂಗಾರದ ಸರವನ್ನ ಕದ್ದು ಕಳ್ಳ ಪರಾರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಶಾಂತಿ ನಗರ ಬಳಿ ಸರಗಳ್ಳತನ ಘಟನೆ ಜರುಗಿದೆ.
ವೃದ್ದೆ ಪಾರ್ವತಮ್ಮ ಎಂಬುವವರಿಂದ ಸರ ಕದ್ದು ಕಳ್ಳ ಪರಾರಿಯಾಗಿದ್ದಾರೆ. ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ವಾಕ್ ಮಾಡುವ ಸಂದರ್ಭದಲ್ಲಿ 15 ಗ್ರಾಂ ತೂಕದ ಬಂಗಾರ ಸರ ಕದ್ದು ಸರಗಳ್ಳ ಪರಾರಿಯಾಗಿದ್ದಾರೆ. ಚಳ್ಳಕೆರೆ ನಗರದಲ್ಲೂ ಸರಗಳ್ಳತನ ಇತ್ತೀಚೆಗೆ ಹೆಚ್ಚುತ್ತಿದೆ. ಸ್ಥಳಕ್ಕೆ ಚಳ್ಳಕೆರೆ ಪಿಎಸ್ಐ ಸತೀಶ್ ನಾಯ್ಕ್ ಭೇಟಿ, ಪರಿಶೀಲನೆ ಮಾಡಿದ್ದಾರೆ.