i
ಜೆಡಿಎಸ್ ಅಭ್ಯರ್ಥಿಗಳಿಗೆ ರಹಸ್ಯ ಸ್ಥಳದಲ್ಲಿ ಚುನಾವಣಾ ಕಾರ್ಯತಂತ್ರ, ಗೆಲುವಿನ ಸೂತ್ರಗಳ ಕುರಿತು ತರಬೇತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕು ಎನ್ನುವ ಹಠದಲ್ಲಿರುವ ಜೆಡಿಎಸ್ ಗೆಲ್ಲಲು ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದೆ.
ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವಂತ ಅಭ್ಯರ್ಥಿಗಳಿಗೆ ಎಲ್ಲ ರೀತಿಯಿಂದಲೂ ಅನುಕೂಲ ಆಗಬೇಕು ಎನ್ನುವ ನಿಟ್ಟಿನಲ್ಲಿ ದೆಹಲಿ ಮತ್ತು ಬೆಂಗಳೂರಿನ ನುರಿತ ವ್ಯಕ್ತಿಗಳಿಂದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಬೆಂಗಳೂರಿನ ರಹಸ್ಯ ಸ್ಥಳ ಒಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ತರಬೇತಿ ನೀಡಲಾಗುತ್ತಿದೆ. ಚುನಾವಣಾ ಕಾರ್ಯತಂತ್ರ, ಗೆಲುವಿನ ಸೂತ್ರಗಳ ಕುರಿತು ತರಬೇತಿ ನೀಡುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ತಂತ್ರಗಾರಿಕೆ ಹೂಡಿದೆ.
ಜೆಡಿಎಸ್ ಪಕ್ಷವು 2023ರಲ್ಲಿ ಸ್ವತಂತ್ರ ಬಲದಿಂದ ಅಧಿಕಾರ ಗದ್ದುಗೆ ಹಿಡಿಯಲು ಕಸರತ್ತು ಪ್ರಾರಂಭಿಸಿದೆ. ಚುನಾವಣೆಯಲ್ಲಿ ಎಲ್ಲಾ ರೀತಿಯ ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿದೆ.