i
ದೆಹಲಿಯ ಸಂಸತ್ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸಲಿ-ದೇವೇಗೌಡ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪತ್ರ ಬರೆದು ಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಅಭಿವೃದ್ಧಿ ಅತ್ಯಂತ ಮಾದರಿಯಾಗಿದೆ. ಅಷ್ಟೇ ಅಲ್ಲ ಬೆಂಗಳೂರು ಕಟ್ಟಿದ ನಾಡು ಸರ್ವಜನಾಂಗಕ್ಕೂ ಆದ್ಯತೆ ನೀಡಲಾಗಿದೆ. ಇಂತಹ ಮಹಾನ್ ನಾಯಕರ ಪ್ರತಿಮೆ ಉದ್ಘಾಟಿಸಲು ಮೋದಿ ಅವರು ಆಗಮಿಸುತ್ತಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕೆಂಪೇಗೌಡರ 108 ಅಡಿಯ ಪ್ರತಿಮೆ ನಿರ್ಮಾಣವಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೇ ಸಂಸತ್ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪತ್ರ ಬರೆದು ಮನವಿ ಮಾಡಿದ್ದಾರೆ.