i
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರು ನ.14 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ಹೊರಟು ಮಧ್ಯಾಹ್ನ 1:30 ಗಂಟೆಗೆ ಸಿರಿಗೆರೆ ಗ್ರಾಮಕ್ಕೆ ಆಗಮಿಸುವರು. ಸಂಜೆ 5 ಗಂಟೆಗೆ ಶ್ರೀ.ತರಳುಬಾಳು ಜಗದ್ಗುರು ಬೃಹನ್ಮಠ ಹಾಗೂ ತರಳಬಾಳು ಕಲಾ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿರುವ ಕನ್ನಡ ರಾಜ್ಯೋತ್ಸವ-2022 ರ ಸಮಾರಂಭದಲ್ಲಿ ಪಾಲ್ಗೊಳ್ಳುವರು. ರಾತ್ರಿ 9 ಗಂಟೆಗೆ ಚಿತ್ರದುರ್ಗದ ಮೂಲಕವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.