i
ಶರಣರಲ್ಲದೆ ಮಠ ಕೆಲವರು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ದುರ್ಬಳಕೆ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುರುಘಾ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಕಿರುಕುಳ ನೀಡಿ ದುರ್ಬಳಕೆ ಮಾಡಿಕೊಂಡ ನಂತರ ಶರಣರ ಕೆಳ ಹಂತದ ಕೆಲವರು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ಪರಶು ಆಗ್ರಹ ಮಾಡಿದ್ದಾರೆ.
ಮುರುಘಾ ಶರಣರು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡ ನಂತರ ಶರಣರ ಕೆಳ ಹಂತದಲ್ಲಿ ಗುರು ಸ್ಥಾನದಲ್ಲಿರೋ ವ್ಯಕ್ತಿಯೂ ಮಕ್ಕಳನ್ನು ತಮ್ಮ ಕಾಮಕ್ಕೆ ಬಳಸಿಕೊಂಡಿದ್ದಾರೆ. ಅವರ ನಂತರ, ಮಠದ ಕೆಲವು ನೌಕರರು, ಅಧಿಕಾರಿಗಳು ಕೂಡ ಮಕ್ಕಳನ್ನು ಲೈಂಗಿಕವಾಗಿ ಬಳಸಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದು ಸಮಗ್ರ ತನಿಖೆ ಮಾಡಲು ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
2ನೇ ಪ್ರಕರಣದಲ್ಲಿ ಬಿಡುಗಡೆ ಆಗಿರೋ ಆಡಿಯೋ ಆರು ತಿಂಗಳ ಹಿಂದಿನದ್ದು ಅದಕ್ಕೂ ನಮಗೂ ಸಂಬಂಧವಿಲ್ಲ. ಯಾವುದೇ ರೀತಿಯ ತನಿಖೆ ಮಾಡಲು ನಾವು ಸಿದ್ಧರಿದ್ದೇವೆ. ಆದರೆ ವಿದ್ಯಾರ್ಥಿನಿಯರಿಗೆ ಹಣ್ಣಿನಲ್ಲಿ ಮತ್ತು ಬರುವ ಡ್ರಗ್ಸ್ ಮತ್ತು ಮದ್ಯವನ್ನು ಮುರುಘಾ ಶರಣರಿಗೆ ತಂದು ಕೊಡುತ್ತಿದ್ದವರು ಯಾರು? ಎಂಬುದು ಪತ್ತೆ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.