i
ಗ್ರಾಮೀಣ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಿದರೆ ಅಗತ್ಯ ಪುಸ್ತಕಗಳ ಕೊಡುಗೆ ನೀಡುವೆ-ಡಿ.ಟಿ.ಶ್ರೀನಿವಾಸ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ದೇವರಕೊಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ನಡೆದ ವಸತಿ ಶಾಲೆಗಳ ಕ್ರೀಡಾಕೂಟವನ್ನು ಆದಿಜಾಂಬವ ಮಠದ ಶ್ರೀ ಷಡಾಕ್ಷರಿ ಮುನಿ ಸ್ವಾಮೀಜಿ ರವರು ಉದ್ಘಾಟನೆ ಮಾಡಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷ ಡಿ ಟಿ ಶ್ರೀನಿವಾಸ ಭಾಗವಹಿಸಿ ಕ್ರೀಡಾಕೂಟಗಳಿಗೆ ಶುಭಕೋರಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಕೆಎಎಸ್, ಐಎಎಸ್, ಎಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡರೆ ಆ ಪರೀಕ್ಷೆಗೆ ಬೇಕಾಗುವ ಅಗತ್ಯ ಪುಸ್ತಕಗಳನ್ನು ಕೊಡುಗೆ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಇಒ ನಾಗಭೂಷಣ್, ಟಿಪಿಒ ಮನೋಹರ್, ಪ್ರಾಂಶುಪಾಲ ಪ್ರಕಾಶ್, ರಮೇಶ್ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ನಂತರ ಹಿರಿಯೂರು ತಾಲೂಕಿನ ತೊರೆಓಬೇನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷ ಡಿ ಟಿ ಶ್ರೀನಿವಾಸ ರವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶ್ರೀ ವಾಲ್ಮೀಕಿ ವಿಗ್ರಹಕ್ಕೆ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.