i
ನಾಮಪತ್ರ ಸಲ್ಲಿಸಲು ಕೋಲಾರಕ್ಕೆ ಮತ್ತೆ ಬರುವೆ-ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಕೋಲಾರ:
ನಾನು ನಾಮಪತ್ರ ಸಲ್ಲಿಸಲು ಮತ್ತೆ ಕೋಲಾರಕ್ಕೆ ಬರುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುವ ಮೂಲಕ 2023ರ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದಲೇ ಬಹುತೇಕ ಸ್ಪರ್ಧಿಸುವುದು ಖಚಿತವಾದಂತಾಗಿದೆ.
ಮತದಾರರ ನಾಡಿಮಿಡಿತ ಅರಿಯಲು ಭಾನುವಾರ ಕೋಲಾರ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿದ್ದು ಅದಕ್ಕಾಗಿ ಕೋಲಾರ ಕ್ಷೇತ್ರದ ಮತದಾರರ ನಾಡಿಮಿಡಿತ ಅರಿಯಲು ಸಿದ್ದರಾಮಯ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದು ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ಜನ ಪ್ರತಿನಿಧಿಗಳು, ಮುಖಂಡರು ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲ್ಲಿಸುವುದಾಗಿ ಜಯಘೋಷ ಕೂಗಿದ್ದಾರೆ.