i
ಮತದಾರರ ನಾಡಿಮಿಡಿತ ಅರಿಯಲು ಕೋಲಾರಕ್ಕೆ ಹೊರಟ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಜಿಲ್ಲೆಯಿಂದ ಬಾದಾಮಿಗೆ ಶಿಪ್ಟ್ ಆಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬಾದಾಮಿಯಲ್ಲಿ ಸೋಲಿನ ಭಯ ಆರಂಭವಾಗಿದ್ದು ಈಗ ಕೋಲಾರಕ್ಕೆ ಶಿಫ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಇದರ ಅಂಗವಾಗಿ ಮತದಾರರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ನಾಡಿಮಿಡಿತ ಅರಿಯಲು ಸಿದ್ದರಾಮಯ್ಯ ದಿಢೀರ್ ಕೋಲಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಲು ಚಿಂತನೆ ಮಾಡಿರುವ ಸಿದ್ದರಾಮಯ್ಯನವರಿಗೆ ಈಗಾಗಲೇ ಕೋಲಾರ ಜಿಲ್ಲೆಯ ಕಾಂಗ್ರೆಸ್ ಜನ ಪ್ರತಿನಿಧಿಗಳು, ಮುಖಂಡರು ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆಲ್ಲಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೋಲಾರದಲ್ಲಿ ಚರ್ಚ್, ಮಸೀದಿ, ಮಂದಿರಗಳಿಗೆ ಭೇಟಿ ನೀಡಿ ಅವರುಗಳ ಅಭಿಪ್ರಾಯವನ್ನು ಸಂಗ್ರಹ ಮಾಡಲಿದ್ದಾರೆ.