i
ನಗರಸಭೆ ಅಧ್ಯಕ್ಷೆ ಶಿವರಂಜನಿ ದಿಢೀರ್ ರಾಜೀನಾಮೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ ಅಧ್ಯಕ್ಷೆ ಶಿವರಂಜನಿ ಅವರು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಸೋಮವಾರ ದಿಢೀರ್ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಎಸ್.ಶಿವರಂಜನಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ನನ್ನ ವೈಯಕ್ತಿಕ ಕಾರಣಗಳಿಂದಾಗಿ ಸ್ವ-ಇಚ್ಛೆಯಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆಂದು ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಉಲೇಖಿಸಿದ್ದಾರೆ.