i
ಮಕ್ಕಳಿಗಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಬಾಲಭವನ ಸಮಿತಿಯಿಂದ 2022-23ನೇ ಸಾಲಿನ “ಕನ್ನಡ ರಾಜ್ಯೋತ್ಸವ”ದ ಅಂಗವಾಗಿ 5 ರಿಂದ 8 ವರ್ಷ, 9-12 ವರ್ಷ ಮತ್ತು 13-16 ವರ್ಷದ ಒಳಗಿನ ಮಕ್ಕಳಿಗೆ ಮೂರು ಗುಂಪುಗಳಾಗಿ ಪ್ರತ್ಯೇಕವಾದ ವಯೋಮಿತಿಗೆ ಅನುಗುಣವಾಗಿ “ಕನ್ನಡ ಗೀತೆ ಗಾಯನ”
(ಕನ್ನಡ ನಾಡಿನ ಹೆಸರಾಂತ ಕವಿಗಳ, ಸಾಹಿತಿಗಳಿಂದ ರಚಿಸಲ್ಪಟ್ಟ ಕನ್ನಡ ನಾಡಿಗೆ ಸಂಬಂಧಿಸಿದ ಸುಗಮ ಸಂಗೀತ ಹಾಗೂ ಸಿನಿಮಾ ಗೀತೆಗಳನ್ನು ಹಾಡುವುದು) ಸ್ಪರ್ಧೆಯನ್ನು ಇದೇ ನವೆಂಬರ್ 21ರಂದು ಜಿಲ್ಲಾ ಬಾಲಭವನದ ಆವರಣದಲ್ಲಿ ಏರ್ಪಡಿಸಲಾಗಿದೆ.
ಆಸಕ್ತ ಪೋಷಕರು ಮತ್ತು ಮಕ್ಕಳು ನವೆಂಬರ್ 19ರ ಸಂಜೆ 5.30ರ ಒಳಗಾಗಿ ನಿಗಧಿತ ಅರ್ಜಿ ನಮೂನೆಯನ್ನು ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾ ಬಾಲಭವನ ಆವರಣ, ವೀರವನಿತೆ ಓಬವ್ವ ಕ್ರೀಡಾಂಗಣದ ಮುಂಭಾಗ, ರಾಜೇಂದ್ರ ನಗರ, ಚಿತ್ರದುರ್ಗ, ಮೊಬೈಲ್ ಸಂಖ್ಯೆ 7259551325, 9535696793 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.