i
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಣೆ ಮಾಡಿ-ಜಯಮೃತ್ಯುಂಜಯ ಸ್ವಾಮೀಜಿ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರ ರಾಜಕೀಯ ನಾಯಕರ ಮೇಲೆ ಪಂಚಮಸಾಲಿ ಸಮಾಜದ ಋಣ ಇದೆ. ಇದು ಸತ್ಯವಾಗಿದ್ದರೇ ಕೂಡಲೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಣೆ ಮಾಡಬೇಕೆಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ನ್ಯೂ ಇಂಗ್ಲಿಷ್ ಶಾಲಾ ಆವರಣದಲ್ಲಿ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಆಶ್ರಯದಲ್ಲಿ ಮತ್ತು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನನಾಡಿದರು.
ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಡಿ.12ರಂದು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ. ಈ ವೇಳೆಗೆ ಸರ್ಕಾರದ ಹೊಣೆ ಹೊತ್ತಿರುವ ಬೊಮ್ಮಾಯಿ ಅವರು ಮೀಸಲಾತಿ ಕೊಟ್ಟರೆ ಅದ್ಧೂರಿಯಾಗಿ ಸನ್ಮಾನಿಸಿ. ಬೆಳಗಾವಿಯ ಕರದಂಟು ತಿನ್ನಿಸುತ್ತೇವೆ, ಅಲ್ಲದೆ ಕಲ್ಲು ಸಕ್ಕರೆಯಿಂದ ತುಲಾಭಾರ ಮಾಡುತ್ತೇವೆ ಎಂದು ಸ್ವಾಮೀಜಿಗಳು ಘೋಷಣೆ ಮಾಡಿದರು.