i
ಹಿರಿಯೂರು ಪ್ರತಿಭೆ ಟಿ.ಸುಹಾಸ್ ಗೆ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಟಿ ಸುಹಾಸ್ ಚಿತ್ರದುರ್ಗದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆ 2022ರ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಲ್ಲಭಭಾಯ್ ಪಟೇಲ್ ರಸ್ತೆಯ ನಿವಾಸಿ ತ್ಯಾಗರಾಜ್ ಮತ್ತು ಅನು ರವರ ಪುತ್ರ ಸುಹಾಸ್ ಆಗಿದ್ದು ಇವರು ಬಾಲ್ಯದಿಂದಲೂ ಚಿತ್ರಕಲೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿದ್ದು ಪ್ರೋತ್ಸಾಹ ನೀಡುತ್ತಿದ್ದಾರೆಂದು ಅವರು ಪೋಷಕರು ತಿಳಿಸಿದ್ದಾರೆ. ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವರ್ಗದವರು ವಿದ್ಯಾರ್ಥಿ ಸುಹಾಸ್ ಸಾಧನೆಗೆ ಅಭಿನಂದಿಸಿದ್ದಾರೆ.