i
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಹೋದರ ರೇವಣ್ಣ ಅಡ್ಡಿ…!?
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದರೂ ಆ ಪಟ್ಟಿ ಬಿಡುಗಡೆ ಮಾಡಲು ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವರೂ ಎಚ್.ಡಿ.ರೇವಣ್ಣ ತಕರಾರು ಎತ್ತಿದ್ದಾರೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದರು. ಈ ಕುರಿತು ಮೈಸೂರಿನಲ್ಲಿ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಪಟ್ಟಿ ಬಿಡುಗಡೆ ಮಾಡಲು ಈ ದಿನ ಸೂಕ್ತವಲ್ಲ, ಈ ದಿನ ಸರಿಯಿಲ್ಲ ಹಾಗಾಗಿ ಪಟ್ಟಿ ಬಿಡುಗಡೆ ಮಾಡದಂತೆ ಸಹೋದರ ಎಚ್.ಡಿ. ರೇವಣ್ಣ ಅಡ್ಡಿ ಮಾಡುತ್ತಿದ್ದಾರೆಂದು ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, 2023ರ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯುವಂತ 100 ಮಂದಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧು ಪಟ್ಟಿ ಬಿಡುಗಡೆಗೆ ತಕರಾರರು ಬಂದ ಹಿನ್ನೆಲೆ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
ಮುಂದಿನ ಶುಭ ದಿನದೊಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.