i
ನೇಕಾರ ಸಮಾಜ ಸೇರಿದಂತೆ ಶೋಷಿತ ಎಲ್ಲ ಸಮಾಜಗಳು ಶಿಕ್ಷಣಕ್ಕೆ ಒತ್ತು ನೀಡಬೇಕು-ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಒಂದು ಸಮಾಜ ಅಭಿವೃದ್ಧಿಯತ್ತ ಸಾಗಬೇಕು, ಸಮ ಸಮಾಜ ನಿರ್ಮಾಣವಾಗಬೇಕಾದರೆ ಕಡ್ಡಾಯವಾಗಿ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘು ಮೂರ್ತಿ ಹೇಳಿದರ.
ಚಳ್ಳಕೆರೆ ನಗರದ ಲಕ್ಷ್ಮಮ್ಮ ತಿಪ್ಪೇಸ್ವಾಮಿ ಕಲ್ಯಾಣ ಮಂಟಪದಲ್ಲಿ ಚಳ್ಳಕೆರೆ ತಾಲ್ಲೂಕು ನೇಕಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಭಾನುವಾರ ನಡೆದ ನೇಕಾರರ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಷ್ಟ ಇದೆ, ಮಕ್ಕಳನ್ನು ಓದಿಸಲು ಆಗುವುದಿಲ್ಲ ಎನ್ನುವ ನೆಪ ಹೇಳಬೇಡಿ, ಸರ್ಕಾರಿ ಯೋಜನೆಗಳನ್ನು ಬಳಸಿಕೊಂಡು ಶಿಕ್ಷಣ ಕೊಡಿಸುವತ್ತ ಗಮನ ನೀಡಬೇಕು ಎಂದರು.
ನೇಕಾರ ಸಮಾಜ ಸೇರಿದಂತೆ ಎಲ್ಲ ಸಮುದಾಯಗಳಿಗೆ ಶಕ್ತಿ ತುಂಬುವ ಕಾರ್ಯವನ್ನು ನಾನು ಮಾಡುತ್ತೇನೆ. ನೇಕಾರ ಸಮಾಜಕ್ಕೊಂದು ಸಿಎ ನಿವೇಶನ ನೀಡುವಂತೆ ಈಗಾಗಲೇ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ನೇಕಾರ ಸಂಘದ ಅಧ್ಯಕ್ಷರಾದ ಹಾಗೂ ಅಧ್ಯಕ್ಷರು ಸದಸ್ಯರುಗಳು ಮುಖಂಡರುಗಳಾದ ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.