i
ರಾಜ್ಯ ಅಂಗವಿಕಲ ವ್ಯಕ್ತಿಗಳ ಆಯುಕ್ತರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಶಾಸನಬದ್ಧವಾಗಿ ರಚಿಸಲಾದ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದಿರತಕ್ಕದ್ದು, ಸಮಾಜ ಸೇವೆ / ಕಾನೂನು / ನಿರ್ವಹಣೆ / ಮಾನವ ಹಕ್ಕು / ಪುನರ್ವಸತಿ / ವಿಕಲಚೇತನರ ಶಿಕ್ಷಣ ವಿದ್ಯಾರ್ಹತೆಯಲ್ಲಿ ಪದವಿ ಅಥವಾ ಡಿಪ್ಲೊಮಾ ಪಡೆದಿರಬೇಕು. ರಾಜ್ಯ ಸರ್ಕಾರದ ‘ಎ’ ವೃಂದದ ಅಧಿಕಾರಿಯಾಗಿ ಕನಿಷ್ಟ 2 ವರ್ಷದ ಅವಧಿಗೆ ವಿಕಲಚೇತನರ ಕಲ್ಯಾಣ ಹಾಗೂ ಪುನರ್ವಸತಿ ಯೋಜನೆಯಡಿ ಸೇವೆಯನ್ನು ಸಲ್ಲಿಸಿರಬೇಕು. ಅಥವಾ ವಿಕಲಚೇತನರ ಕ್ಷೇತ್ರದ ವಿಭಾಗವನ್ನು ನಿರ್ವಹಿಸುತ್ತಿರುವ ಕೇಂದ್ರ / ರಾಜ್ಯ ಸರ್ಕಾರ / ಸರ್ಕಾರಿ ಸಾರ್ವಜನಿಕ ವಲಯದ ಉದ್ದಿಮೆ / ಅರೆ ಸರ್ಕಾರಿ / ಸ್ವಾಯುತ್ತ ಸಂಸ್ಥೆಗಳಲ್ಲಿಯ ಉನ್ನತ ಮಟ್ಟದ ಸಂಪನ್ಮೂಲ ವ್ಯಕ್ತಿಯು ವಿಕಲಚೇತನರ ಪುನರ್ವಸತಿ ಕ್ಷೇತ್ರ್ರದಲ್ಲಿ ಕನಿಷ್ಟ 15 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು.
ನೋಂದಾಯಿತ ಅಂಚೆ ಸ್ವೀಕೃತಿ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ಸರ್ಕಾರದ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, 1ನೇ ಮಹಡಿ, 3ನೇ ಗೇಟ್, ಬಹುಮಹಡಿಗಳ ಕಟ್ಟಡ, ಬೆಂಗಳೂರು – 560001.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://dwdsc.karnataka.gov.in ನ್ನು ವೀಕ್ಷಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.