i
ಪತ್ನಿ ಶೀಲ ಶಂಕಿಸಿ ಗರ್ಭಿಣಿ ಪತ್ನಿ ಕೊಲೆ ಮಾಡಿದ ಕಿರಾತಕ ಪತಿ…
ಚಂದ್ರವಳ್ಳಿ ನ್ಯೂಸ್, ಚನ್ನಗಿರಿ:
ಶೀಲ ಶಂಕಿಸಿ ಪತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ಕಾಡಿನಲ್ಲಿ ಹೂತು ಹಾಕಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಗಂಗಗೊಂಡನಹಳ್ಳಿಯಲ್ಲಿ ನಡೆದಿದೆ.
ಮಗಳ ಶೀಲ ಶಂಕಿಸಿ ಹಿಂಸೆ ನೀಡುತ್ತಿದ್ದ ಪತಿ ವರದಕ್ಷಿಣೆ ತರುವಂತೆ ಸದಾ ಕಿರುಕುಳ ನೀಡುತ್ತಿದ್ದ ಎಂದು ಮೃತ ಗರ್ಭಿಣಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಪತಿ ಮೋಹನ್ ಕುಮಾರ್(25) ಎಂಬಾತನನ್ನು ಬಂಧಿಸಿದ್ದಾರೆ.
ಚನ್ನಗಿರಿ ತಾಲೂಕಿನ ಗಂಗಗೊಂಡನಹಳ್ಳಿ ನಿವಾಸಿ ಚಂದ್ರಕಲಾ ಅಲಿಯಾಸ್ ರಶ್ಮಿ(20) ಎಂಬುವವರು ನಾಪತ್ತೆಯಾಗಿದ್ದಾರೆಂದು ಆರೋಪಿ ಪತಿ ಮೋಹನ್ ಕುಮಾರ್ ಅಲಿಯಾಸ್ ಮನು(25) ಪೊಲೀಸರಿಗೆ ದೂರು ನೀಡಿದ್ದನು.
ಆದರೆ ಯುವತಿಯ ತಂದೆ ಮೋಹನ್ ವಿರುದ್ಧ ಮಗಳಿಗೆ ವರದಕ್ಷಿಣೆ ಕಿರುಕುಳ ಹಾಗೂ ಶೀಲ ಶಂಕಿಸಿ ಹಿಂಸೆ ನೀಡುತ್ತಿದ್ದ. ಕಳೆದ ಕೆಲವು ದಿನಗಳಿಂದ ರಶ್ಮಿ ಎಲ್ಲೂ ಕಾಣಿಸುತ್ತಿಲ್ಲ. ಕೇಳಿದರೆ ಸರಿಯಾಗಿ ಉತ್ತರವನ್ನೂ ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವಳನ್ನು ಕೊಲೆ ಮಾಡಿ ಹೂತುಹಾಕಿರಬಹುದು ಎಂದು ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದಾಗ ಚಿಕ್ಕಮಗಳೂರು ಜಿಲ್ಲೆಯ ಕಾಡಿನಲ್ಲಿ ಕೊಲೆ ಮಾಡಿ ಹೂತು ಹಾಕಿರುವುದಾಗಿ ಒಪ್ಪಿಕೊಂಡಿದ್ದು ಪೊಲೀಸರು ಆ ಜಾಗಕ್ಕೆ ಆರೋಪಿಯನ್ನ ಕರೆದೊಯ್ದು ಹೂತು ಹಾಕಿರುವ ಶವವನ್ನು ಹೊರ ತೆಗೆಸಿದ್ದಾರೆ. ಈ ಮೂಲಕ ಕೊಲೆ ಪ್ರಕರಣವನ್ನು ಪೊಲೀಸ್ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಠಾಣೆಯಸಲ್ಲಿ ಪ್ರಕರಣ ದಾಖಲಾಗಿದೆ.