i
ಭಯೋತ್ಪಾದನೆ ಚಟುವಟಿಕೆಗೆ ಸಂಪೂರ್ಣ ಕಡಿವಾಣ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭಯೋತ್ಪಾದನೆ ಚಟುವಟಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದ ಪೊಲೀಸರು 18 ಜನ ಸ್ಲೀಪರ್ ಸೆಲ್ಗಳ ಹೆಡೆಮುರಿ ಕಟ್ಟಿ ತಿಹಾರ್ ಜೈಲಿಗೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣದಲ್ಲಿಡುವ ಕೆಲಸ ಮಾಡಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಿರಿಯೂರು ತಾಲ್ಲೂಕಿನ ವಿ.ವಿ. ಸಾಗರ ಜಲಾಶಯದಲ್ಲಿ ಮಂಗಳವಾರ ಬಾಗಿನ ಅರ್ಪಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಹೊರ ರಾಜ್ಯದ ಸಂಪರ್ಕ ಇಟ್ಟುಕೊಂಡು ಕೆಲವರು ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆ ಮಾಡುತ್ತಿದ್ದಾರೆ. ದೇಶದ ಸುರಕ್ಷತೆ ದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ಸೆರೆ ಸಿಕ್ಕ ಉಗ್ರನ ವಿವರಗಳನ್ನು 24 ಗಂಟೆಗಳಲ್ಲಿ ಪೊಲೀಸರು ಭೇದಿಸಿದ್ದಾರೆ. ಇದರ ಹಿಂದೆ ಯಾವ ಅಂತರರಾಷ್ಟ್ರೀಯ, ರಾಷ್ಟ್ರೀಯ ಸಂಘಟನೆಗಳ ಬೆಂಬಲ ಇದೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.