i
ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕಾಗಿ ನವೆಂಬರ್-27 ರಂದು ಸಭೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಒಕ್ಕಲಿಗರ ಸಂಘ ಹಾಗೂ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ದಿನಾಂಕ 27. 11.2022 ಭಾನುವಾರ ಬೆಳಿಗ್ಗೆ 10.30 ಗಂಟೆಗೆ ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಒಕ್ಕಲಿಗರ ಮೀಸಲಾತಿ ಹೆಚ್ಚಿಸುವ ವಿಚಾರವಾಗಿ ಸಮಾಜದ ಪ್ರಮುಖರ ಸಭೆಯನ್ನು ಸ್ವಾಮೀಜಿಗಳ ನೇತೃತ್ವದಲ್ಲಿ ಕರೆಯಲಾಗಿದೆ.
ಈ ಸಭೆಯ ಸಾನಿಧ್ಯವನ್ನು ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಹಾಗೂ ಶ್ರೀ ಡಾ. ನಂಜಾವಧೂತ ಮಹಾಸ್ವಾಮೀಜಿ ಯವರ ದಿವ್ಯಸಾನಿಧ್ಯದಲ್ಲಿ ಸಮಾಜದ ಹಿರಿಯರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಚಿವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಮುದಾಯದ ಎಲ್ಲಾ ಹಾಲಿ ಮತ್ತು ಮಾಜಿ ಸಚಿವರು, ಸಂಸದರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು, ಸಾಹಿತಿಗಳು, ಸಂಘ ಸಂಸ್ಥೆಗಳ ಪ್ರಮುಖರು, ರೈತ ಮುಖಂಡರು, ಕಾರ್ಮಿಕರ ಮುಖಂಡರು, ನೌಕರವರ್ಗದವರು, ವಕೀಲರು, ವೈದ್ಯರು, ವಿದ್ಯಾರ್ಥಿಗಳು, ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು, ಕಲಾವಿದರು, ವಾಣಿಜ್ಯೋದ್ಯಮಿಗಳು, ಶಿಕ್ಷಣ ತಜ್ಞರು, ಸಮಾಜದ ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತಿತರ ರಾಜ್ಯವ್ಯಾಪಿಯಾಗಿರುವ ಸಮಾಜ ಬಂಧುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪ ರೆಡ್ಡಿ, ಉಪಾಧ್ಯಕ್ಷರಾದ ಡಾ ಕೆ. ವಿ. ರೇಣುಕ ಪ್ರಸಾದ್ ಡಿ.ಹನುಮಂತಯ್ಯ, ಜಂಟಿ ಕಾರ್ಯದರ್ಶಿ ರಾಘವೇಂದ್ರ, ಸಮಿತಿ ಸದಸ್ಯ
ಆರ್ ಪ್ರಕಾಶ್, ಗಾ.ನಂ. ಶ್ರೀಕಂಠಯ್ಯ, ಆಡಿಟರ್ ನಾಗರಾಜ್ ಯಲಚವಾಡಿ ಮತ್ತಿತರರು ತಿಳಿಸಿದ್ದಾರೆ.