i
ತೆಂಗಿನ ಕಾಯಿ ಕೀಳುವವರು, ನೀರಾ ತಂತ್ರಜ್ಞರು, ಕೃಷಿ ಕಾರ್ಮಿಕರಿಗಾಗಿ ವಿಮಾ ಯೋಜನೆಗೆ ನ.30 ಅರ್ಜಿ ಸಲ್ಲಿಕೆ ಕೊನೆಯ ದಿನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2022-23ನೇ ಸಾಲಿನಲ್ಲಿ ತೆಂಗು ಅಭಿವೃದ್ಧಿ ಮಂಡಳಿಯವರು ಓರಿಯಂಟಲ್ ವಿಮಾ ಕಂಪನಿ ಸಹಯೋಗದೊಂದಿಗೆ ತೆಂಗಿನ ಮರ ಹತ್ತುವವರು, ತೆಂಗಿನ ಕಾಯಿ ಕೀಳುವವರು, ನೀರಾ ತಂತ್ರಜ್ಞರು, ಕೃಷಿ ಕಾರ್ಮಿಕರು ತೆಂಗಿನ ತೋಟದಲ್ಲಿ ಕೆಲಸ ಮಾಡುವಾಗ ಏನಾದರೂ ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ, ಅಂಗವಿಕಲರಾಗಿದ್ದಲ್ಲಿ ವಿವಿಧ ಹಂತಗಳಲ್ಲಿ ವಿಮೆಯನ್ನು ನೀಡಲು ಕೇರಾ ಸುರಕ್ಷಾ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಆಸಕ್ತ ಅರ್ಹ ಫಲಾನುಭವಿಗಳು ವಾರ್ಷಿಕ ರೂ.99 ಗಳ ರೈತ ವಂತಿಕೆಯನ್ನು ನವೆಂಬರ್ 30ರೊಳಗಾಗಿ ಪಾವತಿಸಿ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಕೃಷಿ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಥವಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸಹಿಯನ್ನು ಮಾಡಿಸಿ, ಇದರ ಜೊತೆಗೆ ರೈತರ ವಂತಿಕೆಯನ್ನು ಪಾವತಿಸಿದ ರಶೀದಿಯೊಂದಿಗೆ ನೇರವಾಗಿ ನಿರ್ದೇಶಕರು, ತೆಂಗು ಅಭಿವೃದ್ಧಿ ಮಂಡಳಿ, ಪ್ರಾದೇಶಿಕ ಕಚೇರಿ, ಬೆಂಗಳೂರು ಇವರಿಗೆ ಕಳುಹಿಸಿಕೊಡಬೇಕು.
ತೆಂಗು ಅಭಿವೃದ್ಧಿ ಇಲಾಖೆಯಿಂದ ನೀಡುವ ಬಾಂಡ್ ಪ್ರತಿ ಇದ್ದಲ್ಲಿ ಮಾತ್ರ ವಿಮೆಯ ಮೊತ್ತ ಪಾವತಿಯಾಗುತ್ತದೆ.
ಸಲ್ಲಿಸಬೇಕಾದ ದಾಖಲಾತಿಗಳು: ತೆಂಗು ಅಭಿವೃದ್ಧಿ ಮಂಡಳಿಯ ಅರ್ಜಿ ನಮೂನೆ, ಅರ್ಜಿದಾರರ ವಯಸ್ಸಿನ ಪುರಾವೆ ಪತ್ರ ನೀಡಬೇಕು. ಅರ್ಜಿದಾರರ ವಯಸ್ಸು 18-65 ನಡುವೆ ಇರಬೇಕು. ಆಧಾರ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿ ಸಲ್ಲಿಸಬೇಕು. ಅರ್ಜಿಯನ್ನು ನಿರ್ದೇಶಕರು, ತೆಂಗು ಅಭಿವೃದ್ಧಿ ಮಂಡಳಿ, ಹುಳಿಮಾವು:ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076 ಗೆ ಸಲ್ಲಿಸಬೇಕು. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಡಾ.ಜಿ.ಸವಿತ ತಿಳಿಸಿದ್ದಾರೆ.
2022-23ನೇ ಸಾಲಿನಲ್ಲಿ ತೆಂಗು ಅಭಿವೃದ್ಧಿ ಮಂಡಳಿಯವರು ಓರಿಯಂಟಲ್ ವಿಮಾ ಕಂಪನಿ ಸಹಯೋಗದೊಂದಿಗೆ ತೆಂಗಿನ ಮರ ಹತ್ತುವವರು, ತೆಂಗಿನ ಕಾಯಿ ಕೀಳುವವರು, ನೀರಾ ತಂತ್ರಜ್ಞರು, ಕೃಷಿ ಕಾರ್ಮಿಕರು ತೆಂಗಿನ ತೋಟದಲ್ಲಿ ಕೆಲಸ ಮಾಡುವಾಗ ಏನಾದರೂ ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ, ಅಂಗವಿಕಲರಾಗಿದ್ದಲ್ಲಿ ವಿವಿಧ ಹಂತಗಳಲ್ಲಿ ವಿಮೆಯನ್ನು ನೀಡಲು ಕೇರಾ ಸುರಕ್ಷಾ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಆಸಕ್ತ ಅರ್ಹ ಫಲಾನುಭವಿಗಳು ವಾರ್ಷಿಕ ರೂ.99 ಗಳ ರೈತ ವಂತಿಕೆಯನ್ನು ನವೆಂಬರ್ 30ರೊಳಗಾಗಿ ಪಾವತಿಸಿ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಕೃಷಿ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಥವಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸಹಿಯನ್ನು ಮಾಡಿಸಿ, ಇದರ ಜೊತೆಗೆ ರೈತರ ವಂತಿಕೆಯನ್ನು ಪಾವತಿಸಿದ ರಶೀದಿಯೊಂದಿಗೆ ನೇರವಾಗಿ ನಿರ್ದೇಶಕರು, ತೆಂಗು ಅಭಿವೃದ್ಧಿ ಮಂಡಳಿ, ಪ್ರಾದೇಶಿಕ ಕಚೇರಿ, ಬೆಂಗಳೂರು ಇವರಿಗೆ ಕಳುಹಿಸಿಕೊಡಬೇಕು.
ತೆಂಗು ಅಭಿವೃದ್ಧಿ ಇಲಾಖೆಯಿಂದ ನೀಡುವ ಬಾಂಡ್ ಪ್ರತಿ ಇದ್ದಲ್ಲಿ ಮಾತ್ರ ವಿಮೆಯ ಮೊತ್ತ ಪಾವತಿಯಾಗುತ್ತದೆ.
ಸಲ್ಲಿಸಬೇಕಾದ ದಾಖಲಾತಿಗಳು: ತೆಂಗು ಅಭಿವೃದ್ಧಿ ಮಂಡಳಿಯ ಅರ್ಜಿ ನಮೂನೆ, ಅರ್ಜಿದಾರರ ವಯಸ್ಸಿನ ಪುರಾವೆ ಪತ್ರ ನೀಡಬೇಕು. ಅರ್ಜಿದಾರರ ವಯಸ್ಸು 18-65 ನಡುವೆ ಇರಬೇಕು. ಆಧಾರ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿ ಸಲ್ಲಿಸಬೇಕು. ಅರ್ಜಿಯನ್ನು ನಿರ್ದೇಶಕರು, ತೆಂಗು ಅಭಿವೃದ್ಧಿ ಮಂಡಳಿ, ಹುಳಿಮಾವು:ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076 ಗೆ ಸಲ್ಲಿಸಬೇಕು. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಡಾ.ಜಿ.ಸವಿತ ತಿಳಿಸಿದ್ದಾರೆ.