i
ರಾಜೀನಾಮೆ ಅಂಗೀಕಾರ, ಎಲ್ಲರಿಗೂ ಧನ್ಯವಾದ ಹೇಳಿದ ನಗರಸಭೆ ಅಧ್ಯಕ್ಷ ಶಿವರಂಜನಿ ಯಾದವ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆ ಅಧ್ಯಕ್ಷರಾಗಿ ನಾಲ್ಕು ತಿಂಗಳ ಕಾಲ ಸಾರ್ವಜನಿಕ ಸೇವೆ ಮಾಡಿ ರಾಜೀನಾಮೆ ನೀಡಿದ್ದೇನೆ. ನನಗೆ ಅಧ್ಯಕ್ಷರಾಗಲು ಅವಕಾಶ ಮಾಡಿಕೊಟ್ಟಂತಹ ನೆಚ್ಚಿನ ನಾಯಕರಾದ ಮಾಜಿ ಸಚಿವ ಡಿ. ಸುಧಾಕರ್ ಅವರಿಗೆ, ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷರು ಹಿರಿಯ ಮುಖಂಡರುಗಳಿಗೆ ಪಕ್ಷದ ಎಲ್ಲಾ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರಿಗೆ ಎಲ್ಲಾ ಸಮಾಜದ ಮುಖಂಡರುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ನಗರಸಭೆ ಅಧ್ಯಕ್ಷೆ ಶಿವರಂಜನಿ ಯಾದವ್ ಅವರು ತಿಳಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ, ನನ್ನ ಆಡಳಿತಾವಧಿಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸಹಕಾರ ನೀಡಿದ ಹಿರಿಯೂರು ನಗರಸಭೆ ಪೌರಾಯುಕ್ತ ಡಿ.ಉಮೇಶ್, ನಗರಸಭೆ ಆಡಳಿತ ಅಧಿಕಾರಿಗಳು, ನಗರಸಭಾ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ನಗರಸಭಾ ಸದಸ್ಯರುಗಳು, ನಗರಸಭಾ ನಾಮಿನೇಟ್ ಸದಸ್ಯರು, ಪ್ರೀತಿಯ ಪೌರಕಾರ್ಮಿಕರು ಹಾಗೂ ತಾಲೂಕು ತಹಸಿಲ್ದಾರರು ಪ್ರಶಾಂತ್ ಗೌಡ ಪಾಟೀಲ್ ಮತ್ತು ಕಂದಾಯ ಇಲಾಖೆ ಆಡಳಿತ ಸಿಬ್ಬಂದಿ ವರ್ಗದವರಿಗೆ ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿರೋಧ ಪಕ್ಷದವರಿಗೂ ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ನಾಗರಿಕ ಬಂಧುಗಳಿಗೆ ನಾನು ನಗರಸಭೆ ಅಧ್ಯಕ್ಷರಾಗಿ ನಾಲ್ಕು ತಿಂಗಳು ಸಾರ್ವಜನಿಕ ಸೇವೆ ಮಾಡಲು ಸಲಹೆ ಸೂಚನೆಗಳನ್ನು ನೀಡಿ ಪ್ರೀತಿಯಿಂದ ಸಹಕರಿಸಿದ್ದರಿಂದಾಗಿ ಎಲ್ಲರಿಗೂ ಹೃದಯಪೂರ್ವಕವಾಗಿ ಧನ್ಯವಾದಗಳನ್ನು ಶಿವರಂಜನಿ ಯಾದವ್ ತಿಳಿಸಿದ್ದಾರೆ.