i
ಕಟ್ಟಡ ಕಾರ್ಮಿಕರಿಗೆ ಸಹಾಯಹಸ್ತ ಪಾಸುಗಳ ವಿತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಹಯೋಗದೊಂದಿಗೆ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ “ಸಹಾಯಹಸ್ತ” ಬಸ್ ಪಾಸುಗಳನ್ನು ಸಂಸ್ಥೆಯ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ವಿತರಿಸಲಾಗುತ್ತಿದೆ.
ಸದರಿ ಸಹಾಯಹಸ್ತ ಪಾಸುಗಳನ್ನು ಡಿಸೆಂಬರ್ 1 ರಿಂದ ಸಂಸ್ಥೆಯ ಬಸ್ ನಿಲ್ದಾಣ ಹಾಗೂ ಘಟಕಗಳಲ್ಲಿ ವಿತರಣೆಯನ್ನು ಸ್ಥಗಿತಗೊಳಿಸಿ, ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳುರು ಒನ್ ಕೇಂದ್ರಗಳಲ್ಲಿ ಸ್ಮಾರ್ಟ್ಕಾರ್ಡ್ ಮಾದರಿಯ ಪಾಸುಗಳನ್ನು ವಿತರಣೆ ಮಾಡಲು ಕ್ರಮ ಕೈಗೊಂಡಿದೆ.
ನೋಂದಾಯಿತ ಕಟ್ಟಡ ಕಾರ್ಮಿರು ಡಿಸೆಂಬರ್ 1 ರಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ನ ಪ್ರತಿಯನ್ನು ಪ್ರಸ್ತುತ ಪಡಿಸಿ ಸ್ಮಾರ್ಟ್ಕಾರ್ಡ್ ಸಹಾಯಹಸ್ತ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.