i
ಹಿರಿಯೂರು ಕಾಂಗ್ರೆಸ್ ಮುಖಂಡರು ಶಾಸಕಿ ಪೂರ್ಣಿಮಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲದಿರುವುದನ್ನ ಅರಿತ ಕಾಂಗ್ರೆಸ್ ಮುಖಂಡರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹಿರಿಯೂರು ತಾಲ್ಲೂಕು ದಿಂಡಾವರ ಗ್ರಾಮ ಪಂಚಾಯಿತಿ ಸದಸ್ಯ ಹಿಂದುಳಿದ ವರ್ಗಗಳ ಮುಖಂಡ ಲಕ್ಕೇನಹಳ್ಳಿ ಕರಿಯಪ್ಪ ಅವರು ಸೇರಿದಂತೆ ಅವರ ಹಿಂಬಾಲಕರು ಕಾಂಗ್ರೆಸ್ ಪಕ್ಷ ತೊರೆದು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮೇಣಪ್ಪ, ಬಾಲಣ್ಣ, ಕೃಷ್ಣ, ಪರುಶುರಾಮಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಕೃಷ್ಣ, ಪರಮೇಶ್, ಎಸ್ ಟಿ ಮೋರ್ಚಾ ಮಾಜಿ ಅಧ್ಯಕ್ಷ ಮಾಯಸಂದ್ರ ಮಂಜು ಮುಂತಾದವರು ಉಪಸ್ಥಿತರಿದ್ದರು.