i
ಒಕ್ಕಲಿಗ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮಂಜೂರಾತಿಗೆ ದಿನಾಂಕ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2022-23ನೇ ಸಾಲಿಗೆ ಒಕ್ಕಲಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ವೃತ್ತಿಪರ/ತಾಂತ್ರಿಕ/ಉನ್ನತ ವ್ಯಾಸಂಗದ ಕೋರ್ಸ್ ಗಳಲ್ಲಿನ ಶಿಕ್ಷಣಕ್ಕೆ ವಾರ್ಷಿಕ ಗರಿಷ್ಟ ರೂ.1.00 ಲಕ್ಷಗಳಂತೆ ಅಥವಾ ವ್ಯಾಸಂಗದ ವಾಸ್ತವಿಕ ವೆಚ್ಚದ ಮಿತಿಗೆ ಒಳಪಟ್ಟು ಕೋರ್ಸ್ನ ಅವಧಿ ಅನುಸಾರ ಗರಿಷ್ಟ ರೂ.4.00 ಲಕ್ಷಗಳಿಂದ ರೂ.5.00 ಲಕ್ಷಗಳವರೆಗೆ ವಾರ್ಷಿಕ 27 ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲು ನಿಗದಿಪಡಿಸಲಾದ ದಿನಾಂಕವನ್ನು ವಿದ್ಯಾರ್ಥಿಗಳ ಬೇಡಿಕೆಯಿಂದ ಹಾಗೂ ವಿವಿಧ ಕಾರಣಗಗಳಿಂದ ಮರು ನಿಗದಿಪಡಿಸಲಾಗಿದ್ದು, ಅಂತಿಮ ದಿನಾಂಕವನ್ನು ಡಿಸೆಂಬರ್ 22ರ ವರೆಗೆ ವರೆಗೆ ವಿಸ್ತರಿಸಲಾಗಿರುತ್ತದೆ.
ಈ ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಕಛೇರಿಯನ್ನು ಅಥವಾ ನಿಗಮದ ವೆಬ್ಸೈಟ್ನಲ್ಲಿ https://kvcdc karnataka.gov.in/ ಅಥವಾ ನಿಗಮದ ದೂರವಾಣಿ ಸಂಖ್ಯೆ 080-29904268 ಮತ್ತು ಇಮೇಲ್ ವಿಳಾಸ: idkvcdc@gmail.com ಗೆ, ಸಂಪರ್ಕಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.