i
ಕನ್ನಡ ನಾಡು ಮತ್ತು ಭಾಷೆ ಉಳುವಿಗಾಗಿ ಪ್ರತಿಯೊಬ್ಬರು ಸೇವೆ ಮಾಡೋಣ-ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮೈಸೂರು ರಾಜ್ಯವನ್ನು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ತಿಳಿಸಿದರು.
ಚಳ್ಳಕೆರೆ ನಗರದ ಶ್ರೀಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಚಳ್ಳಕೆರೆ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಧ್ವಜಾರೋಹಣ ಮಾಡಿ ಮಾತನಾಡಿದರು. ಕರ್ನಾಟಕ ಏಕೀಕರಣಕ್ಕೂ ಮೊದಲು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿತ್ತು. ಮೈಸೂರು ರಾಜ್ಯ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಮದ್ರಾಸ್ ಕರ್ನಾಟಕ. ಈ ಎಲ್ಲ ಭಾಗಗಳಲ್ಲಿ ಕನ್ನಡ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಕರ್ನಾಟಕ ಬಹುಸಂಖ್ಯಾತ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸುವ ಪ್ರಕ್ರಿಯೆ ಭರದಿಂದ ಸಾಗಿತ್ತು. ಸುತ್ತಮುತ್ತಲಿನ ರಾಜ್ಯಗಳ ಕನ್ನಡ ರಾಜ್ಯಗಳು ಕರ್ನಾಟಕದಲ್ಲಿ ವಿಲೀನಗೊಂಡವು. ಅಂತಿಮವಾಗಿ 1956ರಲ್ಲಿ ಕರ್ನಾಟಕ ಏಕೀಕರಣವಾಯಿತು. ಕನ್ನಡ ರಾಜ್ಯೋತ್ಸವವೂ ಅಂದಿನಿಂದ ಆರಂಭವಾಯಿತು. ಈ ಹಿಂದೆ ಕರ್ನಾಟಕ ರಾಜ್ಯದ ಹೆಸರು ಮೈಸೂರು ರಾಜ್ಯ ಎಂದಿತ್ತು ಎಂದು ತಿಳಿಸಿದರು.
ಕನ್ನಡ ನಾಡು ನುಡಿ ಉಳಿವಿಗಾಗಿ ನಾವು ನೀವೆಲ್ಲರೂ ಕೈಲಾದ ಸೇವೆ ಮಾಡಬೇಕು ಎಂದು ಶಾಸಕ ರಘುಮೂರ್ತಿ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ರಘುಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಮೇಶ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಡಿಜೆ ವೆಂಕಟೇಶ್, ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷೆ ಮಂಜುಳಾ ಆರ್ ಪ್ರಸನ್ನ ಕುಮಾರ್, ನಗರಸಭೆ ಸದಸ್ಯರುಗಳಾದ ಸುಜಾತ ಪ್ರಹ್ಲಾದ್, ಕವಿತಾ ಬೋರಯ್ಯ, ಸುಮಾ ಭರಮಯ್ಯ, ಚೈತುಂಬಿ ಮಾಲಿಕ್ ಸಾಬ್, ಪ್ರಕಾಶ್, ರಾಘವೇಂದ್ರ, ರಮೇಶ್ ಗೌಡ, ಮುಖಂಡರುಗಳಾದ ಜಗದೀಶ್, ಕೃಷ್ಣಮೂರ್ತಿ, ದೊಡ್ಡ ರಂಗಪ್ಪ, ಪ್ರಹಲ್ಲಾದ್, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ವೀರೇಶ್, ಖಾದರ್, ಅಂಜನಪ್ಪ, ಬೋರಣ್ಣ ಹಾಗೂ ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.