i
ಡಿಸೆಂಬರ್ 5 ವರೆಗೆ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ತುಂತುರು ಮಳೆಯಾಗಿದೆ. ಅಲ್ಲದೆ ಡಿಸೆಂಬರ್ 5 ತನಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ದಕ್ಷಿಣ ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ. ಕಡಿಮೆ ಒತ್ತಡದ ರೂಪುಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಡಿಸೆಂಬರ್ 5ರ ವರೆಗೆ ಇದೇ ವಾತಾವರಣ ಮುಂದುವರಿಯಲಿದೆ. ಇದರ ಜೊತೆಗೆ ಮಳೆಯ ಸಾಧ್ಯತೆಯೂ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ 48 ಗಂಟೆಗಳಲ್ಲಿ ಈ ಚಂಡಮಾರುತ ಬಂಗಾಳ ಕೊಲ್ಲಿಯತ್ತ ಸಾಗಲಿದ್ದು. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶೀತಮಿಶ್ರಿತ ವಾತಾವರಣ ಒಂದು ವಾರ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.