i
ಡಾ.ರೂಪಾ ಸಾವು ಕೊಲೆಯೋ, ಆತ್ಮಹತ್ಯೆಯೋ, ಆಕಸ್ಮಿಕವೋ?…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ.ರೂಪಾ(49) ಸೋಮವಾರ ಬೆಳಿಗ್ಗೆ ತಮ್ಮ ಮನೆಯಲ್ಲಿ ದಿಢೀರ್ ಸಾವು ಕಾಣುವ ಮೂಲಕ ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದು ಅದು ಕೊಲೆಯೋ, ಆತ್ಮಹತ್ಯೆಯೋ ಅಥವಾ ಆಕಸ್ಮಿಕವೋ ಎನ್ನುವ ಅನುಮಾನದ ಹುತ್ತ ಬೆಳೆಯುತ್ತಿದೆ.
ಮೃತ ಡಾ.ರೂಪ ಅವರು ಮನೆಯಲ್ಲಿದ್ದ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗ ನಗರದ ತೋಟಗಾರಿಕೆ ಇಲಾಖೆಯ ವಿ.ಪಿ. ಬಡಾವಣೆ ನಿವಾಸದಲ್ಲಿ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗುತ್ತಿತ್ತು. ಸಂಜೆ ಆದಂತೆ ಸಾವಿನ ನಿಗೂಢತೆ ತಿಳಿಯದಾಯಿತು. ಜೊತೆಯಲ್ಲಿ ಒಂದು ಡೆತ್ ನೋಟ್ ಸಹ ಸಿಕ್ಕಿದ್ದು ಪೊಲೀಸರು ತನಿಖಾ ದೃಷ್ಠಿಯಿಂದ ಅದನ್ನು ಬಹಿರಂಗ ಪಡಿಸಿಲ್ಲ.
ಆದರೆ ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಿದಾಗ ಕೆಲ ಸಂದೇಹಗಳು ಮೂಡಿದ್ದು ಪೋಸ್ಟ್ ಮಾರ್ಟನ್ ಮಾಡಲು ವೈದ್ಯರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಎರಡನೇ ವರದಿ ಪಡೆಯಲು ವೈದ್ಯರು ಸಲಹೆ ಮಾಡಿದ್ದಾರೆ ಎಂದು ತಿಳಿದಿದೆ. ಬೆಂಗಳೂರಿನಿಂದ ಪೋರೆನ್ಸಿಕ್ ತಜ್ಞರು(Forensic expert) ನವರು ಆಗಮಿಸುತ್ತಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ. ಅವರು ಬಂದು ಹೋದ ನಂತರವೇ postmortem ಮಾಡಲಾಗುತ್ತದೆ ಎಂದು ಕೆಲ ಮೂಲಗಳು ದೃಢಪಡಿಸಿವೆ. ಮೃತ ರೂಪಾ ಅವರ ಪತಿ ಡಾ.ಕೆ.ಜಿ.ರವಿ ಅವರು ಪೊಲೀಸರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.