i
ಬಂಗಾರದ ಎಲೆಗಳು-ಸಾಹಿತಿ ಮಾಹಿತಿ ಕೋಶ ಬಿಡುಗಡೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: golden leaf books
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಹತ್ವದ ಯೋಜನೆಯಾದ ಬಂಗಾರದ ಎಲೆಗಳು-ಸಾಹಿತಿ ಮಾಹಿತಿ ಕೋಶದಲ್ಲಿ 7200ಕ್ಕೂ ಹೆಚ್ಚು ಸಾಹಿತಿಗಳ ಮಾಹಿತಿಯನ್ನು ಸಿದ್ದಪಡಿಸಿ ಅಕಾಡೆಮಿಯ ಅಂತರ್ಜಾಲ www.sahithyaacademy.karnataka.gov.in ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಈ ಸಾಹಿತಿ ಮಾಹಿತಿ ಕೋಶವು ಪ್ರತಿವರ್ಷ ಪರಿಷ್ಕರಣೆಗೊಳ್ಳಲಿದೆ. ಸಾರ್ವಜನಿಕರು ಯಾವುದಾದರು ತಿದ್ದುಪಡಿ, ಹೊಸದಾಗಿ ಸೇರಿಸಬೇಕಾದ ಸಾಹಿತಿಗಳ ಹೆಸರುಗಳಿದ್ದಲ್ಲಿ ಸೂಕ್ತ ಮಾಹಿತಿ ಮತ್ತು ದಾಖಲೆಗಳೊಂದಿಗೆ ಸಾಹಿತ್ಯ ಅಕಾಡೆಮಿಗೆ ಕಳುಹಿಸಿಕೊಟ್ಟಲ್ಲಿ, ಅದನ್ನು ಸಂಪಾದಕ ಮಂಡಳಿಯ ಮುಂದೆ ಮಂಡಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ. ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.