i
ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 2022-23ನೇ ಸಾಲಿನಲ್ಲಿ ಅಡಿಕೆ ಬೆಳೆ ಹೊರತು ಪಡಿಸಿ ಹೊಸದಾಗಿ ಪ್ರದೇಶ ವಿಸ್ತರಣೆ ಕೈಗೊಂಡ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 25-01-2023 ಕಡೆಯ ದಿನವಾಗಿದೆ.
ಆಸಕ್ತ ರೈತರು ನಿಗಧಿತ ಅರ್ಜಿ ನಮೂನೆಗಳನ್ನು ತೋಟಗಾರಿಕೆ ಇಲಾಖೆ ಕಚೇರಿಯಿಂದ ಪಡೆದುಕೊಳ್ಳಬಹುದು. ಯೋಜನೆಯಡಿ ಪ್ರತಿ ಅರ್ಜಿದಾರರಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಮೊದಲ 2 ಹೆಕ್ಟೇರ್ ಪ್ರದೇಶದ ವರೆಗೆ ಪರಿಶಿಷ್ಟ ಜಾತಿ ಮತ್ತ ಪಂಗಡದ ರೈತರಿಗೆ ಶೇ.90 ರಷ್ಟು, ಇತರೆ ಹಾಗೂ ಸಾಮಾನ್ಯ ರೈತರಿಗೆ ಶೇ.75 ರಷ್ಟು, ಉಳಿದಂತೆ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೆ ಶೇ.45ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಇತರೆ ಹಾಗೂ ಸಾಮಾನ್ಯ ವರ್ಗದವರಿಗೆ ಒಮ್ಮೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ್ಮ ನೀರಾವರಿ ಪದ್ದತಿ ಹಾಳಾಗಿದ್ದಲ್ಲಿ, ಘಟಕ ಕಾರ್ಯನಿರ್ವಹಿಸದೇ ಇದ್ದಲ್ಲಿ 7 ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಇಲಾಖೆ ಮಾರ್ಗಸೂಚಿ ಅನ್ವಯ ಸಹಾಯಧನ ಪಡೆಯಲು ಅವಕಾಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಡಾ.ಜಿ.ಸವಿತ, ಚಿತ್ರದುರ್ಗ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.