i
ನಗರ ಮತ್ತು ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನನ್ನ ಕ್ಷೇತ್ರದ ನಗರ ಮತ್ತು ಗ್ರಾಮೀಣ ಭಾಗದ ರಸ್ತೆಗಳನ್ನು ಎಲ್ಲಾ ರಸ್ತೆಗಳನ್ನು ಮಾಡುವ ಮೂಲಕ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ತಾಲೂಕಿನ ಕಾತ್ರಾಳ್ ತಿಮ್ಮಪ್ಪನಹಳ್ಳಿ ಗ್ರಾಮದ ಬಳಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ನೂತನ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಯ ತಿಮ್ಮಪ್ಪನಹಳ್ಳಿಯಿಂದ ಸಿದ್ದವ್ವನದುರ್ಗದವೆರೆಗೆ 5 ಕೋಟಿ ವೆಚ್ಚದಲ್ಲಿ 5 ಕಿಲೋ ಮೀಟರ್ ಡಾಂಬರ್ ರಸ್ತೆ ಮಾಡಲಾಗುತ್ತದೆ. ಈ ರಸ್ತೆ ನಿರ್ಮಾಣದಿಂದ ವಡ್ಡನಹಳ್ಳಿ, ಸಿದ್ದವ್ವನದುರ್ಗ,ಮಾಳೇನಹಳ್ಳಿ, ಮುದ್ದಾಪುರ, ಬೀರಾವರ ಗ್ರಾಮದ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರಿಗೆ ಉತ್ತಮ ರಸ್ತೆ ಇದ್ದರೆ ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆ ಸಾಗಿಸಲು ರಸ್ತೆ ಅತ್ಯಗತ್ಯ ಆದ್ದರಿಂದ ಗ್ರಾಮೀಣ ಭಾಗದ ಎಲ್ಲಾ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ ಎಂದರು.
ಸರ್ಕಾರ ಪ್ರತಿಯೊಂದು ಕುಟುಂಬಕ್ಕೆ ಒಂದಲ್ಲ ಒಂದು ರೀತಿಯ ಸರ್ಕಾರಿ ಸೌಲಭ್ಯ ನೀಡುವಂತಹ ಕೆಲಸ ಮಾಡಿದೆ. ಶಿಕ್ಷಣ, ಆರೋಗ್ಯ, ರೈತರ ಹಿತ ಕಾಯುವ ಕೆಲಸ ಮಾಡುತ್ತಿದೆ. ಪಿಂಚಣಿ ಹೆಚ್ಚಳ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನ ನಿರ್ವಹಿಸುತ್ತಿರುವ ಕೆಲಸಗಾರರಿಗೆ 3 ಸಾವಿರ ಸಂಬಳ ಹೆಚ್ಚಳ ಮಾಡವ ಮೂಲಕ ಸರ್ವ ಜನಾಂಗದ ಅಭಿವೃದ್ಧಿ ಕಡೆ ನಮ್ಮ ಸರ್ಕಾರ ಹೆಜ್ಜೆ ಹಾಕುತ್ತಿದೆ. ಈ ಭಾಗದಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಅಂತರ್ಜಲ ಹೆಚ್ಚಿಸುವ ದೃಷ್ಟಿಯಿಂದ 12 ರಿಂದ 13 ಚೆಕ್ ಡ್ಯಾಂ ನಿರ್ಮಾಣ ಮಾಡಲಾಗಿದೆ. ಎಲ್ಲಾ ಗ್ರಾಮಗಳಲ್ಲಿ ಸಿ.ಸಿ.ರಸ್ತೆ ನಿರ್ಮಾಣ, 180 ನೂತನ ಶಾಲಾ ಕಟ್ಟಡಗಳ ನಿರ್ಮಾಣ ನನ್ನ ಕ್ಷೇತ್ರದಲ್ಲಿ ಮಾಡಿದ್ದೇನೆ. ಮುಂದಿನ ದಿನದಲ್ಲಿ ಬಾಕಿ ಇರುವಂತಹ ಚಿಕ್ಕ ಪುಟ್ಟ ಕೆಲಸ ಪೂರ್ಣಗೊಳಿಸಲಾಗುತ್ತದೆ. ಸಮಗ್ರ ಅಭಿವೃದ್ಧಿ ನನ್ನ ಆಸೆಯಾಗಿದ್ದು ಸರ್ಕಾರದಿಂದ ಹಣ ತಂದು ಎಲ್ಲಾ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಎಂಬ ಖುಷಿ ನನಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಡ್ಡನಹಳ್ಳಿ ಗ್ರಾಮದ ಸುರೇಶ್, ಶರಣಪ್ಪ, ಹನುಮಂತ, ನಾಗರಾಜ್, ಪ್ರಸನ್ನ, ಮಲ್ಲಿಕಾರ್ಜುನ, ಬಾಲರಾಜ್ , ಹನುಮಂತ , ಮಂಜುನಾಥ್, ಓಬಳೇಶ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಂಜುನಾಥ್ ಇದ್ದರು.