i
ನಗರಸಭೆ ಬಜೆಟ್ ತಯಾರಿಸಲು ಸಾರ್ವಜನಿಕರ ಸಲಹೆ ಸೂಚನೆಗೆ ಕೋರಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆಯ 2023-24ನೇ ಸಾಲಿನ ಆಯ-ವ್ಯಯ ತಯಾರಿಸಲು ಅಭಿವೃದ್ಧಿ ಯೋಜನೆಗಳ ಕುರಿತು ನಗರದ ಗಣ್ಯವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗರೀಕರು, ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ.
ಚಿತ್ರದುರ್ಗ ನಗರಸಭೆಯ 2023-24ನೇ ಸಾಲಿನ ಆಯ-ವ್ಯಯ ತಯಾರಿಸುವ ಬಗ್ಗೆ 1ನೇ ಪೂರ್ವಭಾವಿ (ಸಾರ್ವಜನಿಕ ಸಲಹಾ ಸೂಚನಾ) ಸಭೆಯನ್ನು ಏರ್ಪಡಿಸಿರುವುದರಿಂದ ನಗರದ ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗಕರಿಕರು ಸಾರ್ವಜನಿಕರು ಇದೇ ಡಿಸೆಂಬರ್ 15ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರಸಭೆ ಕಚೇರಿ ಸಭಾಂಗಣದಲ್ಲಿ ಆಗಮಿಸಿ, ತಮ್ಮ ಸಲಹೆ ಸೂಚನೆ ನೀಡಲು ಕೋರಿದೆ ಅಥವಾ ಲಿಖಿತ ರೂಪದಲ್ಲಿ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.