i
ಬಿಜೆಪಿ-ಜೆಡಿಎಸ್ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಕಾಂಗ್ರೆಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್,ಬೀದರ್:
ವಿಧಾನಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ ರಾಜಕೀಯ ಚದುರಂಗದಾಟ ಜೋರಾಗಿ ನಡೆಯುತ್ತಿದ್ದು ಬೀದರ್ ದಕ್ಷಿಣ ಕ್ಷೇತ್ರದ ಸಿರ್ಸಿ(ಎ) ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರು, ಮುಖಂಡರು, ಕ್ಷೇತ್ರದ ಮಾಜಿ ಶಾಸಕ ಅಶೋಕ ಖೇಣಿ ಅವರ ಅವರ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಶಾಸಕ ಅಶೋಕ ಖೇಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ಕರೀಮಸಾಬ ಕಮಠಾಣ ಪಕ್ಷದ ಬಾವುಟ ನೀಡಿ ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರನ್ನು ಬರಮಾಡಿಕೊಂಡರು.
ಗ್ರಾಮ ಪಂಚಾಯತ ಅಧ್ಯಕ್ಷ ರಮೇಶ ಖಾಶೆಂಪೂರ, ಸದಸ್ಯರಾದ ರಾಕೇಶ್ ಹುಮನಾಬಾದೆ, ಪಿಕೆಪಿಸ್ ಸದಸ್ಯ ಮಲ್ಲಿಕಾರ್ಜುನ ಎಳ್ಳಿ, ಮುಖಂಡರಾದ ಜಗನಾಥ ನಿಂಬೂರೆ, ಮಹೇಬೂಬ್ ಖುರೇಷಿ, ನೀಲಕಂಠ ಸ್ವಾಮಿ, ಅಜಿಮೊದ್ದಿನ್, ವಾಸುದೇವ ಕೋಲಿ ಸೇರಿದಂತೆ ಅನೇಕರು ಸೇರ್ಪಡೆಯಾದರು. ಗ್ರಾಮದ ಯುವ ಮುಖಂಡರಾದ ಅಡ್ಡೆಪ್ಪಾ ಶೇರಿಕಾರ, ಶರಣು ಸಿದ್ದಾ, ಎಸ್ಟಿ ಘಟಕದ ಅಧ್ಯಕ್ಷ ಸೂಯ ರ್ಕಾಂತ ಸಿಂದೋಲ, ಕಿಸಾನ್ ಸೇಲ್ ಅಧ್ಯಕ್ಷ ಸಂತೋಷ ಪಾಟೀಲ, ಉದಯಕುಮಾರ್ ಮಲಶೆಟ್ಟಿ, ಅಮೃತರಾವ ಪಾಟೀಲ, ಮೈನಾರಿಟಿ ಘಟಕದ ಉಪಾಧ್ಯಕ್ಷರಾದ ಖುದ್ದೂಸ್ ನಾಗನಕೇರಾ, ಮುಖಂಡರಾದ ವೀರಪ್ಪಾ ಅಡ್ಡೆ ಸೇರಿದಂತೆ ಅನೇಕರು ಹಾಜರಿದ್ದರು.