i
ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅತಿಥಿ ಉಪನ್ಯಾಸಕರುಗಳಿಗೆ ರಾಜ್ಯ ಸರ್ಕಾರ ಬಾಕಿ ಇದ್ದ ಗೌರವ ಧನ ಬಿಡುಗಡೆ ಮಾಡಿದೆ.
2021-22ನೇ ಸಾಲಿನಲ್ಲಿ ನೇಮಕಗೊಂಡು, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಈ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ನಡವಳಿ ಹೊರಡಿಸಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೇ ಸಾಲಿಗೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಗೌರವಧನ ಪಾವತಿಸುವ ಸಲುವಾಗಿ ಅನುದಾನ ಬಿಡುಗಡೆ ಮಾಡಲು ಕ್ರಮವಹಿಸಲಾಗಿದೆ. ಇದಕ್ಕಾಗಿ 18,43,68,406 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದಿದೆ.
ಆಯಾ ಕಾಲೇಜು ವ್ಯಾಪ್ತಿಯ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನವನ್ನು ಕರ್ತವ್ಯ ನಿರ್ವಹಿಸಿದ ಅವಧಿಗೆ ಮಾತ್ರ ಪಾವತಿಸುವುದು. ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಂದ ಅನುಮೋದನೆಗೊಂಡಿಲ್ಲದ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಿದ್ದಲ್ಲಿ, ಸಂಬಂಧಪಟ್ಟ ಪ್ರಾಂಶುಪಾಲರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.