i
ಚಳ್ಳಕೆರೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ನಾಯಕ ಮಿಂಚಿನ ಸಂಚಾರ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ನಾಯಕ ಅವರು ಜಾಜೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮೋದೂರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಕ್ಷದ ಮುಖಂಡರೊಡನೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದರು.
ಪ್ರತಿಯೊಬ್ಬರು ಈ ಹಿಂದೆ ಆಗಿರುವ ಕಹಿ ಅನುಭವಗಳನ್ನು ಮರೆತು, ಮುಂದೆ ಬರುವ ಚುನಾವಣೆಗಾಗಿ ಶ್ರಮಿಸಿ ಒಳ್ಳೆಯ ದಿನಗಳಿಗಾಗಿ ನಾವೆಲ್ಲ ಸಂಘಟಿತರಾಗಿ ಹೋರಾಡಬೇಕು. ಪಕ್ಷದ ಅಭ್ಯರ್ಥಿಯ ಪರವಾಗಿ ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ, ಗೆಲುವು ಸಾಧಿಸಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಿತ್ತಯ್ಯ, ಸಂತೋಷ್, ವೆಂಕಟೇಶ್, ಹನುಮಂತರಾಯ, ಗ್ರಾಮ ಪಂಚಾಯಿತಿ ಸದಸ್ಯರು ಪ್ರಭು, ರೈತ ಮೋರ್ಚಾ ಅಧ್ಯಕ್ಷ ನವೀನ್, ಜೆ.ಕೆ.ತಿಪ್ಪೇಶ್, ನಗರ ಘಟಕದ ಅಧ್ಯಕ್ಷ ಈಶ್ವರ ನಾಯಕ, ರವಿ, ಹಲವಾರು ಹಿರಿಯ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.