i
ಮಾದಿಗ ಒಳಮೀಸಲಾತಿ ಹೋರಾಟದ ಬೆನ್ನಿಗೆ ನಿಂತ ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತುಳಿತಕ್ಕೆ ಒಳಗಿರುವ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡುವಂತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕಾಗಿ ಒತ್ತಾಯಿಸಿ ನಡೆಸುತ್ತಿರುವ ಬೃಹತ್ ಹೋರಾಟಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಬೆನ್ನಿಗೆ ನಿಂತು ಎಲ್ಲ ರೀತಿಯ ಸಹಾಯ ಮಾಡಿದ್ದಾರೆ.
ಮಾದಿಗ ದಂಡೋರ ವತಿಯಿಂದ ಮಾದಿಗ ಒಳಮೀಸಲಾತಿಗೆ ಒತ್ತಾಯಿಸಿ ನಡೆಯುವ ಬೃಹತ್ ಸಮಾವೇಶಕ್ಕೆ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರು 20 ಬಸ್ಸುಗಳ ವ್ಯವಸ್ಥೆ ಮಾಡಿ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷ ಕಿರಣ್ ಶಂಕರ್ ರವರ ಮೂಲಕ ಅಸ್ತಾಂತರಿಸಲಾಯಿತು. ಈ ಸಂದರ್ಭ ದಲ್ಲಿ ಅನೇಕ ಮಾದಿಗ ಸಮಾಜದ ಮುಖಂಡರು ಉಪಸ್ಥಿತರಿದ್ದರು.