i
ರಾಜ್ಯದ ನೀರಾವರಿ ಯೋಜನೆಗಳ ಕುರಿತು ಗಮನ ಸೆಳೆದ ದೇವೇಗೌಡರು…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಮಾಜಿ ಪ್ರಧಾನಮತ್ರಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡರು ಗಮನ ಸೆಳೆದಿದ್ದಾರೆ.
ಕೇಂದ್ರ ಸರ್ಕಾರ ಮೇಕೆದಾಟು ಯೋಜನೆ ವಿವಾದ ಬಗೆಹರಿಸಬೇಕು ಎಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಗ್ರಹಿಸಿದ್ದಾರೆ. ಮೇಕೆದಾಟು ವಿಚಾರವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿಷಮ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕರ್ನಾಟಕದ ವಿವಿಧ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ನೀಡಬೇಕೆಂದು ದೇವೇಗೌಡರು ಕೇಂದ್ರಕ್ಕೆ ಮನವಿ ಮಾಡಿ ಗಮನ ಸೆಳೆದರು.
ಕರ್ನಾಟಕ ನೀರಿನ ಕೊರತೆಯ ರಾಜ್ಯ. ತುಂಗಭದ್ರಾ, ಮಹದಾಯಿ ಹೀಗೆ ಕೇಂದ್ರದ ಮುಂದೆ ಎಷ್ಟೋ ಯೋಜನೆಗಳು ಬಾಕಿ ಇವೆ. ಇಂದು ಹಳೇ ಮೈಸೂರು ಭಾಗದ ಒಂಬತ್ತು ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಮೊರೆ ಹೋಗುತ್ತಿದ್ದೇವೆ ಎಂದು ಶೂನ್ಯ ವೇಳೆಯಲ್ಲಿ ದೇವೇಗೌಡರು ಪ್ರಸ್ತಾಪಿಸಿದರು. ಹೀಗಾಗಿ ಕರ್ನಾಟಕದ ಸಮಸ್ಯೆ ಬಗೆಹರಿಯಬೇಕು ಹೇಳಿದರು.